ಮಂಗಳವಾರ, ಡಿಸೆಂಬರ್ 6, 2011

ಸಮ್ಮೇಳನದಲ್ಲಿ ಭೇಟಿಯಾಗೋಣ...

ಗೆಳೆಯರೇ, ಇದೇ ಡಿಸೆಂಬರ್ ೯, ೧೦ ಹಾಗೂ ೧೧ನೇ ತಾರೀಖಿನಂದು ಗಂಗಾವತಿಯಲ್ಲಿ ನಡೆಯುತ್ತಿರುವ ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದಿನ ಅವಶ್ಯಕತೆಯಾಗಿರುವ ತಂತ್ರಜ್ಞಾನ ಹಾಗೂ ಅದರಲ್ಲಿ ಕನ್ನಡದ ಇಂದಿನ ಸ್ಥಿತಿ, ಬಳಕೆ ಹಾಗೂ ಮುಂದಿರುವ ದಾರಿಯ ಬಗ್ಗೆ “ಆಧುನಿಕ ಜಗತ್ತು ಮತ್ತು ಕನ್ನಡ” ಎನ್ನುವ ವಿಚಾರ ಘೋಷ್ಠಿಯೊಂದನ್ನು ೧೦ನೇ ಡಿಸೆಂಬರ್ ಸಂಜೆ ೪.೩೦ ಕ್ಕೆ ಏರ್ಪಡಿಸಲಾಗಿದೆ.

ಈ ಗೋಷ್ಠಿಯಲ್ಲಿ ನಾನು “ಪರಿಣಾಮಕಾರಿ ಆಡಳಿತಕ್ಕಾಗಿ ಕನ್ನಡದಲ್ಲಿ ತಂತ್ರಜ್ಞಾನ” ಅನ್ನುವ ವಿಷಯದ ಕುರಿತು ಮಾತನಾಡುತ್ತಿದ್ದೇನೆ. ಇದರಲ್ಲಿ ಮುಖ್ಯವಾಗಿ ಆಡಳಿತದ ಅಂದರೆ ಏನು? ಪರಿಣಾಮಕಾರಿ ಆಡಳಿತ ಗುಣ ಲಕ್ಷಣಗಳೇನು? ಆಡಳಿತವನ್ನು ಪರಿಣಾಮಕಾರಿಯಾಗಿ ಜನರಿಗೆ ಮುಟ್ಟಿಸುವಲ್ಲಿ ತಂತ್ರಜ್ಞಾನ ಪಾತ್ರವೇನು? ಹಾಗೂ ಆಡಳಿತವನ್ನು ಪರಿಣಾಮಕಾರಿಯಾಗಿ ಜನರಿಗೆ ಮುಟ್ಟಿಸುವಲ್ಲಿ ಭಾಷೆಯ ಪ್ರಾಮುಖ್ಯತೆ ಹಾಗೂ ಇದರಿಂದ ನಮ್ಮ ಸಮಾಜದಲ್ಲಿ ತರಬಹುದಾದ ಬದಲಾವಣೆಗಳ ಬಗ್ಗೆ ನನ್ನ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದೇನೆ.

ನನ್ನ ಜೊತೆಗೆ ಗೆಳೆಯರಾದ ಓಂಶಿವಪ್ರಕಾಶ್ ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ ಇಂದು - ಮುಂದು ಅನ್ನೋ ವಿಷಯದ ಕುರಿತು ಮಾತನಾಡಲಿದ್ದಾರೆ, ಶ್ರೀನಿಧಿ ಟಿ.ಜಿ ಅವರು ಆಧುನಿಕ ಜಗತ್ತಿನ ಬೇಡಿಕೆಗಳು ಮತ್ತು ಕನ್ನಡ ತಂತ್ರಜ್ಞಾನ ಅನ್ನೋ ವಿಷಯದ ಕುರಿತು ತನ್ನ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ.
ನೀವು ಅಲ್ಲಿಗೆ ಬಂದಿದ್ದರೆ ಖಂಡಿತವಾಗಿ ಈ ಗೋಷ್ಠಿಯಲ್ಲಿ ಭಾಗವಹಿಸಿ ಹಾಗು ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ