ನಮ್ಮ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾಗಿರುವ ಶ್ರೀ ಸದಾನಂದಗೌಡರು ನೆನ್ನೆ ಬೆಂಗಳೂರಿನಲ್ಲಿ ಮಲೆಯಾಳಿಗಳು ಏರ್ಪಡಿಸಿದ್ದ ಪೊನ್ನಂ ೨೦೧೧ ಎನ್ನುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಷಯ ಇಷ್ಟೇ ಇದ್ದಿದ್ದರೆ ಸಮಸ್ಯೆ ಏನು ಇರುತ್ತಿರಲಿಲ್ಲ. ಆದರೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ತುಂಬ ಅವರು ಮಾತನಾಡಿದ್ದು ಮಲೆಯಾಳಿಯಲ್ಲಿಯೇ ಎಂದು ಪತ್ರಿಕಾ ವರದಿಯೊಂದು ಹೇಳಿತ್ತಿದೆ!!!!
ಹಲವಾರು ದಶಕಗಳಿಂದ ನಮ್ಮ ರಾಜ್ಯದಲ್ಲಿಯೇ ವಾಸಿಸುತ್ತಿರುವ ಮಲೆಯಾಳಿಗಳು, ಕನ್ನಡವನ್ನ ಕಲಿತು ಕನ್ನಡಿಗರ ಜೊತೆ ಸಾಮರಸ್ಯದಿಂದ ಬದುಕುತ್ತಿರುವ ಹಾಗೂ ಬದಲಾವಣೆಯಲ್ಲಿ ಪಾಲ್ಗೊಳ್ಳುತ್ತಿರುವ ಈ ಸಂದರ್ಭದಲ್ಲಿ, ನೀವು ಕನ್ನಡಿಗರಲ್ಲ ಎನ್ನೋ ಬಹುದೊಡ್ಡ ತಪ್ಪು ಸಂದೇಶವನ್ನು ನಮ್ಮ ಮುಖ್ಯಮಂತ್ರಿಗಳು ನೀಡುತ್ತಿರುವುದು ಸರಿಯೇ? ಭಾಷೆಯ ಮೂಲಕವೇ ಉತ್ತಮ ಸಮಾಜವನ್ನ ಕಟ್ಟಬೇಕಾಗಿರುವುದು ಇಂದಿನ ಅವಶ್ಯಕತೆ ಹಾಗೂ ಇದೇ ಸರಿಯಾದ ದಾರಿ ಕೂಡ. ಆದರೆ ಸದಾನಂದಗೌಡರ ನಡೆ ಪರಭಾಷಿಕರನ್ನು ಹೊರಗಿನವರಾಗಿಯೇ ಇಡುವ ಪ್ರಯತ್ನವಾಗಿ ಕಾಣುತ್ತಿದೆ. ತಮಗಿರುವ ಮಲೆಯಾಳಿ ಪಾಂಡಿತ್ಯವನ್ನು ಅವರು ಕೇರಳಕ್ಕೆ ಹೋದಾಗ ತೋರಿಸಿದರೆ ಅವರ ನಡೆಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಅದರೆ ನೆನ್ನೆಯ ಘಟನೆ ಭಾಷಾ ಅಲ್ಪಸಂಖ್ಯಾತರ ಓಲೈಕೆಯಂತೆಯೇ ಮೇಲ್ನೋಟಕ್ಕೆ ಕಾಣಿಸುತ್ತಿದೆ. ನಾಳೆ ಮತ್ಯಾವುದೋ ಭಾಷಿಕ ಸಮುದಾಯ ಅವರನ್ನ ಕಾರ್ಯಕ್ರಮಕ್ಕೆ ಅಹ್ವಾನಿಸಿದರೆ, ಅಲ್ಲೂ ಇದೇ ತರಹದ ಘಟನೆ ಪುನರಾವರ್ತನೆಯಾದರೆ? ಇಂತಹ ಹೆಜ್ಜೆಗಳು ನಾಡಿನ ಒಡಕಿಗೆ ಕಾರಣವಾಗುವದಿಲ್ಲವೇ?
ಈ ಹಿಂದೆಯು ಸಹ ಚುನಾವಣೆ ಸಮಯದಲ್ಲಿ ಬಿ.ಜೆ.ಪಿ ಪಕ್ಷ ಇಂತಹ ಭಾಷ ಅಲ್ಪಸಂಖ್ಯಾತರನ್ನು ಓಲೈಸಲು ನಡೆಸಿದ ಕಸರತ್ತುಗಳನ್ನು ಹಾಗೂ ಅದರ ವಿರುದ್ಧ ಕರವೇ ನಡೆಸಿದ್ದ ಪ್ರತಿಭಟನೆಗಳನ್ನು ನಾವುಗಳು ಕಂಡಿದ್ದೇವೆ. ಭಾಷಾ ಅಲ್ಪಸಂಖ್ಯಾತರನ್ನು ಓಟಿಗಾಗಿ ಓಲೈಸುವ ಭರದಲ್ಲಿ, ಇದರಿಂದ ನಾಡಿನ ಸಮಾಜದಲ್ಲಿ ಭಾಷೆಯ ಆಧಾರದ ಮೇಲೆ ಉಂಟಾಗುವ ಒಡಕಿನ ಬಗ್ಗೆ ನಮ್ಮ ರಾಜಕೀಯ ಪಕ್ಷಗಳು ಖಂಡಿತವಾಗಿ ಗಮನ ಹರಿಸಲೇ ಬೇಕು. ಆಯಾ ನಾಡಿನಲ್ಲಿ ಅಲ್ಲಿಯ ಭಾಷೆಗೆ ಆದ್ಯತೆ ನೀಡಬೇಕು. ಹೊರಗಿನಿಂದ ಬಂದವರು ಇಲ್ಲಿನವರಾಗಿ ಬಾಳಲು ಅವಕಾಶ ಮಾಡಿಕೊಡಬೇಕು. ಏನಂತೀರಿ?
ಸೋಮವಾರ, ಸೆಪ್ಟೆಂಬರ್ 26, 2011
ಗುರುವಾರ, ಜುಲೈ 28, 2011
ಹೈಕಮಾಂಡ್!!! ಹೈಕಮಾಂಡ್!!!

ಕರ್ನಾಟದಲ್ಲಿ ಕಳೆದೆರೆಡು ವಾರಗಳಿಂದ ನಡೆಯುತ್ತಿರುವ ಈ ರಾಜಕೀಯ ದೊಂಬರಾಟ ದೇಶದ ಗಮನವನ್ನ ತನ್ನತ ಸೆಳೆದಿದೆ. ಅಕ್ರಮ ಗಣಿಗಾರಿಕೆಯ ಬಗ್ಗೆ ಲೋಕಾಯುಕ್ತರು ನೀಡಿರುವ ವರದಿ ರಾಜಕೀಯ ಪಕ್ಷಗಳು ಹಾಗೂ ಅವರ ನಾಯಕರುಗಳಲ್ಲಿ ಆತಂಕ ಹುಟ್ಟಿಸಿದೆ. ಮುಂದೆ ಈ ರಾಜಕೀಯ ದೊಂಬರಾಟ ಹೇಗೆ ತಿರುವುಗಳನ್ನು ಪಡೆಯುತ್ತದೋ ಕಾದು ನೋಡೋಣ.
ಆದರೆ ಈ ಪ್ರಕರಣ ಹೊರಬಿದ್ದಾಗಿನಿಂದ ಹೈಕಮಾಂಡಿನ ಹೆಸರು ಎಂದಿಗಿಂತ ಹೆಚ್ಚು ಪದೇ ಪದೇ ಕಿವಿಯ ಮೇಲೆ ಬೀಳುತ್ತಲೇ ಇದೆ. ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳ ನಾಯಕರು ಎದ್ದರೂ ಹೈಕಮಾಂಡ್, ಬಿದ್ದರೂ ಹೈಕಮಾಂಡ್, ಕನಸಿನಲ್ಲೂ ಹೈಕಮಾಂಡ್ ಎಂದು ಕನವರಿಸುತ್ತಾ ಇರುತ್ತಾರೆ. ಕಾಂಗ್ರೆಸ್, ಬಿಜೆಪಿ ಎಂದು ಪಕ್ಷ ಭೇದ ಮರೆತು ನಮ್ಮ ರಾಜ್ಯದ ನಾಯಕರುಗಳು ಹೈಕಮಾಂಡಿನ ದಾಸ್ಯಕ್ಕೆ ಒಗ್ಗಿಹೋಗಿದ್ದಾರೆ ಎಂದೆನಿಸುತ್ತದೆ. ಹೈಕಮಾಂಡಿನ ಕರೆ ಬಂದ ಕೂಡಲೇ ಉಟ್ಟ ಬಟ್ಟೆಯಲ್ಲಿ ದೆಹಲಿಗೆ ಓಡಿ ಹೋಗುವ ಚಾಳಿ ನಮ್ಮ ರಾಜ್ಯದ ನಾಯಕರುಗಳಿಗೆ ಅಭ್ಯಾಸ ಆಗಿ ಹೋಗಿದೆ. ನಮ್ಮ ರಾಜ್ಯದ ಯಾವುದೇ ಪ್ರಮುಖ ವಿಷಯಗಳಲ್ಲಿ ತೀರ್ಮಾನವಾಗಬೇಕಾದರೂ ದೆಹಲಿಯಲ್ಲಿ ಗಂಟೆಗಟ್ಟಲೆ ಕೈಕಟ್ಟಿಕೊಂಡು ನಿಲ್ಲಬೇಕಾದ ಪರಿಸ್ಥಿತಿ ನಮ್ಮ ಜನಪ್ರತಿನಿಧಿಗಳದು. ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರನ್ನು ಭೇಟಿ ಮಾಡಲು ಹಲವಾರೂ ದಿನಗಳು ಕಳೆದರೂ ಭೇಟಿ ಮಾಡಲು ಸಾಧ್ಯವಾಗದೆ ವಾಪಸ್ ಬಂದಿರುವ ಅನೇಕ ಸುದ್ದಿಗಳನ್ನು ಪತ್ರಿಕೆಗಳಲ್ಲಿ ನೋಡಿರುತ್ತೇವೆ... ತೀರಾ ಇತ್ತೀಚಿಗಿನ ಬೆಳವಣಿಗೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಗಳನ್ನೂ ಆರಿಸಲು ಸಹ ನಮ್ಮ ರಾಜ್ಯದ ಬಿಜೆಪಿ ನಾಯಕರು ಹೈಕಮಾಂಡಿನತ್ತ ಮುಖಮಾಡಿರುವುದು ನಮ್ಮ ರಾಜ್ಯದ ೬ ಕೋಟಿ ಜನರ ವಿಶ್ವಾಸಕ್ಕೆ ದ್ರೋಹ ಮಾಡಿತಂತಾಗಿದೆ? ರಾಜ್ಯದ ಹಿತಕ್ಕಾಗಿ ಸ್ವಂತ ನಿರ್ಧಾರಗಳನ್ನು ತಗೆದುಕೊಳ್ಳಲು ಸಾಧ್ಯವಿಲ್ಲವೆಂದಾದರೆ ಅವರುಗಳು ನಾಯಕರಾಗಿ ಮುಂದುವರೆಯುತ್ತಿರುವುದಾದರೂ ಏಕೆ?
ನಮ್ಮ ರಾಜ್ಯದ ಒಳಿತನ್ನು ನಿರ್ಧರಿಸಲು ಹೈಕಮಾಂಡ್ ಬೇಕೆ?
ನಾಯಕತ್ವ ಬದಲಾವಣೆಯ ಈ ಸಮಯದಲ್ಲಿ ಮುಂದಿನ ಮುಖ್ಯಮಂತ್ರಿಯಾರಗಬೇಕು ಎನ್ನುವ ತೀರ್ಮಾನವನ್ನು ಹೈಕಮಾಂಡ್ ತಗೆದುಕೊಳ್ಳಲು ಹೊರಟಿದೆ ಎನ್ನುವು ಸುದ್ದಿ ಬರುತ್ತಿದೆ. ಇಷ್ಟಕ್ಕೂ ನಮ್ಮ ರಾಜ್ಯದಲ್ಲಿ ಯಾರು ಮುಖ್ಯಮಂತ್ರಿಯಾರಾಗಬೇಕು ಎನ್ನುವ ನಿರ್ಧಾರವನ್ನು ತೀರ್ಮಾನ ಮಾಡಲು ಹೈಕಮಾಂಡ್ ಬೇಕೆ? ಅಸಲಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಮುಖ್ಯಮಂತ್ರಿ ಯಾರಾಗಿರಬೇಕು ಎನ್ನುವ ನಿರ್ಧಾರವನ್ನು ಮಾಡಬೇಕಾಗಿರುವವರು ನಮ್ಮ ಪ್ರತಿನಿಧಿಗಳಾದ ಶಾಸಕರು ಅಲ್ಲವೇ? ಇದನ್ನೆಲ್ಲ ಮೀರಿ ನಾಯಕತ್ವ ತೀರ್ಮಾನಿಸೋಕೆ ಹೈಕಮಾಂಡ್ ಗೆ ಇಲ್ಲಿನ ಯಾವ ಪರಿಸ್ಥಿತಿಯ ಅರಿವಿರುತ್ತದೆ? ಒಕ್ಕೂಟ ವ್ಯವಸ್ಥೆಯ ಆಶಯಕ್ಕೆ ಮಾರಕಾವಾಗಿರುವ ಈ ಹೈಕಮಾಂಡ್ ದಾಸ್ಯದಿಂದ ನಮ್ಮ ರಾಷ್ಟ್ರೀಯ ರಾಜಕೀಯ ಪಕ್ಷಗಳು ಎಂದು ಹೊರಗೆ ಬರುತ್ತವೆ? ಒಂದು ರಾಷ್ಟ್ರೀಯ ಪಕ್ಷ ಎಂದಾಕ್ಷಣ ಎಲ್ಲಾ ನಿರ್ಧಾರಗಳು ಮೇಲಿಂದಲೇ ಬರಬೇಕೆಂದೇನಿಲ್ಲ ಅಲ್ಲವೇ?. ಆದಷ್ಟು ಬೇಗ ಈ ಪರಿಸ್ಥಿತಿಯಿಂದ ನಮ್ಮ ರಾಜಕೀಯ ಪಕ್ಷಗಳು ಹೊರಬರಲಿ, ಹೈಕಮಾಂಡ್ ದಾಸ್ಯದಿಂದ ಮುಕ್ತವಾಗಲಿ ಎಂದು ಆಶಿಸೋಣ. ಕನ್ನಡಿಗರಲ್ಲಿ ಈ ಕುರಿತು ಜಾಗೃತಿಯಾಗಬೇಕು, ನಮ್ಮ ನಿರ್ಧಾರಗಳನ್ನು ನಾವೇ ತಗೆದುಕೊಳ್ಳುವಂತಾಗಬೇಕು.
ಲೇಬಲ್ಗಳು:
ಒಕ್ಕೂಟ ವ್ಯವಸ್ಥೆ,
ಪ್ರಜಾಪ್ರಭುತ್ವ,
ಹೈಕಮಾಂಡ್
ಶುಕ್ರವಾರ, ಜುಲೈ 22, 2011
ಕರ್ನಾಟಕದವರು ಬಿಟ್ಟಿ ಬಿದ್ದಿದ್ದಾರಾ?

ಬಹುಷಃ ಕರ್ನಾಟಕದವರ ಮೇಲೆ ಆಗುತ್ತಿರುವ ದೌರ್ಜನ್ಯದ ಸರಮಾಲೆಗೆ ಹೊಸದೊಂದು ನೋವುಂಟು ಮಾಡುವ ವಿಚಾರ ಸೇರಿಕೊಂಡಿದೆ. ನಿನ್ನೆಯಿಂದ ಪ್ರದರ್ಶನ ಕಾಣುತ್ತಿರುವ ತಮಿಳಿನ ರೀಮೇಕ್ ಚಿತ್ರವಾದ ಸಿಂಗಂ ಅನ್ನೋ ಹಿಂದಿ ಸಿನೇಮಾದಲ್ಲಿ ನಾಯಕ ಹಾಗೂ ಖಳನಾಯಕನ ಪಾತ್ರದ ನಡುವೆ ನಡೆಯುವ ಸಂಭಾಷಣೆಯಲ್ಲಿ ಖಳನಾಯಕ “ನಾನು ಕರ್ನಾಟಕದ ಗಡಿಯಿಂದ ೧೦೦೦ ಜನರನ್ನು ಕರೆತರುತ್ತೇನೆ ಎಂದು ಹೇಳಿದಾಗ ಅದಕ್ಕೆ ಪ್ರತಿಯಾಗಿ ನಾಯಕ ನಿನ್ನಂತ ೧೦೦೦ ನಾಯಿಗಳನ್ನು ಬೇಟೆಯಾಡಲು ನನ್ನಂತ ಒಂದು ಸಿಂಹ ಸಾಕು ಎಂದು ಹೇಳುತ್ತಾನೆ”, ಅಲ್ಲಿಗೆ ಚಿತ್ರದ ಪ್ರಕಾರ ಕರ್ನಾಟಕದ ಗಡಿ ಭಾಗಗಳಲ್ಲಿ ವಾಸಿಸುವ ಜನರು ನಾಯಿಗಳಂತೆ? ಇನ್ನೊಂದು ವಿಶೇಷ ಅಂದ್ರ ಈ ಚಿತ್ರದ ನಿರ್ದೇಶಕ ರೋಹಿತ್ ಶೆಟ್ಟಿ ಹಾಗೂ ಖಳನಾಯಕನ ಪಾತ್ರದಲ್ಲಿ ನಟಿಸಿರುವ ಪ್ರಕಾಶ್ ರೈ ಇಬ್ಬರೂ ಕರ್ನಾಟಕದವರೇ (?) ಆಗಿದ್ದರೂ ಒಂದು ರಾಜ್ಯದ ಜನರಿಗೆ ನೋವುಂಟು ಮಾಡುವಂತಹ ಸಂಭಾಷಣೆಯನ್ನ ಬಳಲಸೇಬಾರದಿತ್ತು ಅನ್ನೋ ಪರಿಜ್ಞಾನ ಕೂಡ ಅವರಲ್ಲಿ ಇರಲಿಲ್ವೇ?
ಆದರೆ ನಿಜಕ್ಕೂ ಗಡಿ ಭಾಗವಾದ ಬೆಳಗಾವಿಯಲ್ಲಿ ಕಷ್ಟ ಅನುಭವಿಸುತ್ತಿರುವುದು ಕನ್ನಡದ ಜನರೇ ಅನ್ನೋದು ನಮಗೆಲ್ಲಾ ಗೊತ್ತಿರುವುದೇ. ಎಂ.ಇ. ಎಸ್ ನಂತಹ ಒಂದು ಸಂಘಟನೆ ಹುಟ್ಟಿಕೊಂಡಾಗಿನಿಂದ ಕನ್ನಡಿಗರ ಪಾಡು ನೆಲಕಚ್ಚಿತ್ತು. ತಮ್ಮ ಬೇಳೆ ಕಾಳು ಬೇಯಿಸಿಕೊಳ್ಳೋಕೆ ಒಂದಾಗಿ ಬಾಳುತ್ತಿದ್ದ ಕನ್ನಡ ಹಾಗೂ ಮರಾಠಿ ಭಾಷಿಕರ ನಡುವೆ ಕಂದಕ ಸೃಷ್ಠಿಸಿದ ಜನರಿವರು. ಕನ್ನಡಿಗರ ವಿರುದ್ಧ ಎಂತಹ ಹೀನ ಕೆಲಸಕ್ಕಾದರೂ ತಯಾರಾಗಿರುವ ಜನರಿವರು. ಸುಮಾರು ೩೦-೪೦ ವರ್ಷಗಳಿಂದ ಇವರ ದಬ್ಬಾಳಿಕೆಯಿಂದ ಬೇಸತ್ತಿದ್ದ ಜನರಿಗೆ ಕರವೇ ಯಂತಹ ಕನ್ನಡ ಪರ ಸಂಘಟನೆ ದುಡಿದ ಪರಿಣಾಮ ಇಂದು ಕನ್ನಡಿಗರು ಕೊಂಚ ಉಸಿರಾಡುವಂತಹ ಪರಿಸ್ಥಿತಿ ಇದೆ. ಆದರೆ ಇನ್ನೊಬ್ಬರ ನೋವಿನಲ್ಲೂ ಸುಖಪಡುವ ಎಂ.ಇ.ಎಸ್ ನಂತಹ ಸಂಘಟನೆಯ ಜನರ ತೆವಲಿಗಾಗಿ ಇಂತಹ ಸಂಭಾಷಣೆಗಳನ್ನು ಸೇರಿಸಿ ಕರ್ನಾಟಕದ ಜನರಿಗೆ ಅವಮಾನವೆಸಗುವುದೆ ಎಷ್ಟರ ಮಟ್ಟಿಗೆ ಸರಿ?
ಕನ್ನಡಿಗರ ವಿಶ್ವಮಾನವತೆ!!
ಇಂದು ಬೆಳಗ್ಗೆ ಸುವರ್ಣ ವಾಹಿನಿಯಲ್ಲಿ ಕರವೇ ಅಧ್ಯಕ್ಷ ಶ್ರೀ ಟಿ.ಎ. ನಾರಾಯಣಗೌಡರ ಸಂದರ್ಶನದಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಕರೆ ಮಾಡಿದ ಕರ್ನಾಟಕದ ಪ್ರಜೆಗಳೊಬ್ಬರು ಚಿತ್ರದ ಸಂಭಾಷಣೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಕನ್ನಡಿಗರ ಪರವಾಗಿದೆ ಹಾಗಾಗಿ ಅದಕ್ಕೆ ಅಡ್ಡಿಪಡೆಸಬೇಡಿ ಅಂತ ಸಲಹೇ ನೀಡಿದರು. ಬಹುಷಃ ಅವರು ನಿಜಕ್ಕೂ ವಿಶ್ವಮಾನವರೇ ಇರಬೇಕು. ಹೀಗೆ ಕನ್ನಡಿಗರು ತಮ್ಮತನವನ್ನ ಮರೆತು ಕನ್ನಡಿಗರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಸಹಿಸಿಕೊಂಡು ಬದುಕಬೇಕಾದ ಹೀನ ಪರಿಸ್ಥಿತಿಗೆ ಇಂಥವರೆ ಕಾರಣ. ನಮ್ಮ ಹೇಡಿತನಕ್ಕೆ, ನಮ್ಮ ಅಭಿಮಾನ ಶ್ಯೂನ್ಯತೆಗೆ ನಾವು ಕೊಟ್ಟಿರುವ ಹೆಸರು ವಿಶ್ವಮಾನವತೆಯೇ? ಕರ್ನಾಟಕದವರನ್ನು ಅವಹೇಳಿಸಿ ಮಾತನಾಡಿರುವುದು ಇದೇ ಮೊದಲ್ಲಲ, ಹಾಗೆಯೇ ಇದೇ ಕೊನೆಯಾಗುತ್ತದೆಂಬ ನಂಬಿಕೆ ಕೂಡ ಇಲ್ಲಾ. ಒಂದು ಒಕ್ಕೂಟದ ವ್ಯವಸ್ಥೆಯಲ್ಲಿ ಬದುಕುತ್ತಿರುವ ವಿವಿಧ ರಾಜ್ಯಗಳ ಜನರ ನಡುವೆ ಒಡಕು ತರಬಹುದಾದಂತಹ ಇಂತಹ ಕೆಲಸಗಳನ್ನ ತಡೆಯುವುದಕ್ಕೆ ಅಲ್ಲಿಯ ಜನರಿಂದ ಮಾತ್ರ ಸಾಧ್ಯ, ಜನ ಎಚ್ಚೆತುಕೊಳ್ಳಬೇಕು, ನಾವು, ನಮ್ಮತನ ಅನ್ನೋ ಜಾಗೃತಿ ಅವರಲ್ಲಾಗಬೇಕು. ಯಾವುದೇ ಭಾಗದ ಜನರನ್ನ ಕೀಳಾಗಿ ಕಾಣುವ ಇಂತಹ ಹೀನ ಚಾಳಿಗೆ ವಿರುದ್ಧವಾಗಿ ಧ್ವನಿ ಎತ್ತಿ ನಿಲ್ಲಬೇಕು.
ಚಿತ್ರ ಕೃಪೆ: Pics4news
ಲೇಬಲ್ಗಳು:
ಕರ್ನಾಟಕ ರಕ್ಷಣಾ ವೇದಿಕೆ,
ಸಿಂಗಂ,
ಸ್ವಾಭಿಮಾನ
ಭಾನುವಾರ, ಮೇ 29, 2011
ಬೆಂಗಳೂರಿನಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನ
ಬಹುಷಃ ಕಳೆದ ಕೆಲವು ತಿಂಗಳಿಂದ ದೇಶದ ಪ್ರತಿಯೊಬ್ಬ ಪ್ರಜೆಯು ಮಾತನಾಡುತ್ತಿರುವುದು ದೇಶದಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರದ ಬಗ್ಗೆ. ಈ ಭ್ರಷ್ಟಾಚಾರ ಅನ್ನೋ ಮಹಾಮಾರಿ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನ ಕರಾಳ ಬಾಹುವನ್ನು ಚಾಚಿದೆ. ಭ್ರಷ್ಟಾಚಾರ ಸಮಾಜದ ನೈತಿಕತೆಯ ಜೊತೆಗೆ , ಇಡೀ ನಾಡನ್ನೇ ಅಧೋಗತಿಯತ್ತ ಕೊಂಡ್ಯೊಯುತ್ತದೆ. ಇಂದು ಭ್ರಷ್ಟಾಚಾರ ಅನ್ನುವುದು ಜಾತಿ, ಮತ, ಧರ್ಮ, ಭಾಷೆ ಹೀಗೆ ಎಲ್ಲವನ್ನು ಮೀರಿ ಬೆಳೆದು ನಿಂತು ನಮ್ಮ ನಾಡಿನ ಏಳಿಗೆಗೆ ಮಾರಕವಾಗಿ ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಅನ್ನೋ ಭೇದವಿಲ್ಲದೇ ಭ್ರಷ್ಟಾಚಾರ ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ನೆಲೆಗೊಂಡಿದೆ. ಭ್ರಷ್ಟಾಚಾರ ಅಳಿಯದ ಹೊರತು ನಮ್ಮ ರಾಜ್ಯ ಏಳಿಗೆ ಕಾಣುವುದಕ್ಕೆ ಸಾಧ್ಯವೇ ಇಲ್ಲಾ. ಈ ಭ್ರಷ್ಟಾಚಾರ ಎಂಬ ರಕ್ಷಸವನ್ನು ನಾವೆಲ್ಲಾ ಸೇರಿ ಹೊಡೆದು ಹಾಕಲೇ ಬೇಕು.ಕಳೆದ ಕೆಲವು ತಿಂಗಳುಗಳಿಂದ ಅಣ್ಣಾ ಹಜಾರೆ ಅವರ ನೇತ್ರತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಅಸ್ತ್ರವಾಗಿ ಜನಲೋಕಪಾಲ್ ಮಸೂದೆಯನ್ನು ಜಾರಿಗೆ ತರಬೇಕು ಎಂದು ದೇಶಾದ್ಯಂತ ಹೋರಾಟಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಸಿದ್ಧ ಪಡಿಸಿದ್ದ ಲೋಕಪಾಲ್ ಮಸೂದೆ ಭ್ರಷ್ಟರನ್ನು ಶಿಕ್ಷಿಸುವ ಶಕ್ತಿಯನ್ನು ಹೊಂದಿರದ ಕಾನೂನು ಎಂದು ಆರೋಪಿಸುತ್ತಾ ಬಂದಿರುವ ಅಣ್ಣಾ ಹಜಾರೆ ಮತ್ತು ಅವರ ತಂಡ, ಜನರನ್ನು ಒಳಗೊಂಡ ಒಂದು ಲೋಕಪಾಲ್ ಸಂಸ್ಥೆ ಬರಬೇಕು ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಾ ಬಂದಿದ್ದಾರೆ. ಮುಖ್ಯವಾದ ಅಂಶವೆಂದರೆ ಭ್ರಷ್ಟಾಚಾರ ನಿಗ್ರಹಕ್ಕೆ ಹಲವು ಆಯಾಮಗಳಿವೆ. ವಿವಿಧ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ನೋಡುವುದಾದರೆ ಭ್ರಷ್ಟಾಚಾರವನ್ನು ಹತ್ತಿಕ್ಕಲು ವಿವಿಧ ಮಾರ್ಗಗಳು ಕಾಣಸಿಗುತ್ತವೆ. ಹಲವು ಸೈದ್ಧಾಂತಿಕ ಹಿನ್ನೆಲೆಯಲ್ಲಿ ಜನಲೋಕಪಾಲ್ ಕರಡನ್ನು ನೋಡುವುದಾದರೆ ಸಂಪೂರ್ಣವಾಗಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಈ ಮಸೂದೆ ಎಷ್ಟು ಸಹಕಾರಿ? ಈ ಮಸೂದೆಯೇ ಅಂತಿಮವೇ ಅನ್ನೋ ತೀರ್ಮಾನಕ್ಕೆ ಜನರು ಇನ್ನೂ ಬರಬೇಕಿದೆ. ಜನರಲ್ಲಿ ಜಾಗೃತಿ ಮೂಡದ ಹೊರತು ಯಾವುದೇ ಕಾನೂನುಗಳು ಸಮಾಜದ ಸ್ವಾಸ್ಥ್ಯವನ್ನು ಸರಿಪಡಿಸಲಾರವು ಎನ್ನುವುದು ನನ್ನ ನಂಬಿಕೆ.
ಮೊನ್ನೆ 28 ನೇ ತಾರೀಕು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಕೇವಲ ನಗರದ ಸುಶಿಕ್ಷಿತ ಜನರನ್ನ ದೃಷ್ಠಿಯಲ್ಲಿ ಇಟ್ಟುಕೊಂಡು ನಡೆಸಿದ ಕಾರ್ಯಕ್ರಮವಾಗಿತ್ತು ಅನ್ನೋದು ನನ್ನ ಅಭಿಪ್ರಾಯ. ಬೆಂಗಳೂರಿನ ಹಿರಿಯರು, ವಿಧ್ಯಾರ್ಥಿಗಳು, ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳನ್ನು ಹೊರತುಪಡಿಸಿದರೆ ಸಾಮಾನ್ಯ ಜನರು ಕೆಲವೇ ಕೆಲವು ಸಂಖ್ಯೆಯಲ್ಲಿ ಕಂಡುಬಂದರು. ಈ ಮಾತು ಯಾಕೆ ಮುಖ್ಯವೆಂದರೆ ಇಂದು ಭ್ರಷ್ಟಾಚಾರದ ಕರಾಳ ಹಿಡಿತಕ್ಕೆ ಸಿಕ್ಕಿ ನರಳುತ್ತಿರುವವರು ಬಡವರ್ಗದ ಜನರೇ. ಭ್ರಷ್ಟಾಚಾರದ ಕಾರಣದಿಂದಾಗಿ ತಮಗೆ ನ್ಯಾಯವಾಗಿ ಸಿಗಬೇಕಾಗಿದ್ದ ಸವಲತ್ತುಗಳನ್ನು ಸಹ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾವುಗಳು ಸಾಮಾನ್ಯ ಜನರನ್ನು ಕಡೆಗಣಿಸಿ ಈ ಭ್ರಷ್ಟಾಚಾರ ವಿರೋಧಿ ಹೋರಾಟವನ್ನು ಯಶಸ್ವಿಗೊಳಿಸಲು ಸಾಧ್ಯವಿಲ್ಲಾ. ನಿಜಕ್ಕೂ ಈ ಕಾರ್ಯಕ್ರಮದ ವಿವರಗಳು ಸಾಮಾನ್ಯ ಜನರನ್ನು ತಲುಪಿತೇ ಅನ್ನುವುದು ನನ್ನ ಪ್ರಶ್ನೆ?
28 ನೇ ತಾರೀಕು ನಡೆದ ಕಾರ್ಯಕ್ರಮದಲ್ಲಿ ಎದ್ದು ಕಂಡ ಕೊರತೆಯೆಂದರೆ ಕನ್ನಡವನ್ನು ಕಡೆಗಣಿಸಿದ್ದು. ಎಲ್ಲೋ ಕೆಲವು ಬೆರೆಳೆಣಿಕೆಯಷ್ಟು ಕನ್ನಡದ ಗೆಳೆಯರನ್ನು ಬಿಟ್ಟರೆ ಮಿಕ್ಕಿದ್ದೆಲ್ಲಾ ಆಂಗ್ಲ ಹಾಗೂ ಹಿಂದಿಮಯವಾಗಿತ್ತು. ಆಯೋಜಕರು ಹಾಗೂ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ಮರೆತು ಹೋದ ಒಂದು ಪ್ರಮುಖ ವಿಷಯವೆಂದರೆ ಆಯಾ ಪ್ರದೇಶದ ಭಾಷೆಯನ್ನ ಕಡೆಗಣಿಸಿ ಹೋರಾಟ ಅಥವಾ ಆಂದೋಲನವನ್ನ ಯಶಸ್ವಿಗೊಳಿಸಲು ಸಾಧ್ಯವಿಲ್ಲಾ. ಭಾರತದಂತಹ ಒಕ್ಕೂಟ ವ್ಯವಸ್ಥೆಯನ್ನು ಹೊಂದಿರುವ ದೇಶದಲ್ಲಿ ಭಾಷೆ ತುಂಬ ಪ್ರಮುಖ ಹಾಗೂ ಪರಿಣಾಮಕಾರಿ ಸಾಧನವಾಗಿದೆ. ಆದರೆ ಯಾಕೋ ನಮ್ಮ ಆಯೋಜಕರು ಇದನ್ನ ಮರೆತಂತಿದ್ದರು. ಕಾರಣ ಬಂದಿದ್ದ ಅನೇಕ ಜನರಿಗೆ ಕಾರ್ಯಕ್ರಮದ ಗಣ್ಯರು ಮಾಡಿದ ಹಿಂದಿ ಭಾಷಣಗಳು ಅರ್ಥವಾಗಲೇ ಇಲ್ಲಾ. ಶಾಲೆಯಲ್ಲಿ ಹಿಂದಿಯನ್ನು ಒಂದು ಭಾಷೆಯನ್ನಾಗಿ ಕಲಿತಿರುವ ನನಗೇ ಗಣ್ಯರ ಎಲ್ಲಾ ಮಾತುಗಳನ್ನು ಅರ್ಥಮಾಡಿಕೊಳ್ಳಲು ಆಗಲಿಲ್ಲ, ಅಂತಹುದರಲ್ಲಿ ಅನೇಕರಿಗೆ ಭಾಷಣಕಾರರ ಭಾಷಣಗಳು ಅರ್ಥವೇ ಆಗಲಿಲ್ಲ ಅನ್ನೋದು ನೋವಿನ ಸಂಗತಿ. ಕಡೇ ಪಕ್ಷ ಆಯೋಜಕರು ವೇದಿಕೆಯ ಮೇಲೆ ಮಾತನಾಡಿದ ಗಣ್ಯರ ಮಾತುಗಳನ್ನು ಕನ್ನಡಕ್ಕೆ ಅನುವಾದಿಸಿ ಕರಪತ್ರಗಳನ್ನು ಹಂಚಿದ್ದರೆ ಒಳ್ಳೆಯದಿತ್ತೇನೊ ಎಂದು ಅನ್ನಿಸಿತು. ಒಟ್ಟಿನಲ್ಲಿ ನಡೆದ ಕಾರ್ಯಕ್ರಮದ ಉದ್ದೇಶ ಒಳ್ಳೆಯದೇ ಇದ್ದರು ಅದರ ಸಫಲತೆ ಇರುವುದು ಅದನ್ನು ಜನರಿಗೆ ತಲುಪಿಸುವ ಬಗೆಯಲ್ಲಿ. ಈ ನಿಟ್ಟಿನಲ್ಲಿ ಮುಂದೆ ನಡೆಯುವ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಜನ ಸಾಮಾನ್ಯರನ್ನು ತಲುಪುವಂತಾಗಲಿ ಅನ್ನುವುದು ನನ್ನ ಆಶಯ.
ಸೋಮವಾರ, ಏಪ್ರಿಲ್ 18, 2011
ಸೀಟ್ ಬೇಕು ಆದ್ರೆ ರಾಜ್ಯ ಬೇಡಾ....
ಡಾ. ಬಿ. ಆರ್. ಅಂಬೇಡ್ಕರ್ ಅವರ ಜನುಮ ದಿನದಂದು ಒಂದು ಸೋಜಿಗದ ವಿಷಯ ಹೊರಬಿದ್ದಿದೆ. ಪತ್ರಿಕೆಗಳಲ್ಲಿ ಇದರ ಬಗ್ಗೆ ವರದಿಯಾದರು ಸಹ, ಇದನ್ನ ಪತ್ರಿಕೆಗಳು ಗಂಭೀರವಾಗಿ ಪರಿಗಣಿಸಿದಂತೆ ಕಾಣಲಿಲ್ಲ. ವಿಷಯ ಏನಪ್ಪ ಅಂದರೆ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ ಸಿಂಗ್ ಅವರು, ಸದ್ಯಕ್ಕೆ ಅಸ್ಸಾಂ ರಾಜ್ಯದಲ್ಲಿ ನೆಲೆಸುತ್ತಿದ್ದಾರೆ ಅನ್ನೋದನ್ನ ದಾಖಲೆಗಳು ಹೇಳುತ್ತಿವೆ. ಮನಮೋಹನ್ ಸಿಂಗ್ ಹಾಗೂ ಅವರ ಪತ್ನಿ ದಿಸ್ಪುರ್ ಕ್ಷೇತ್ರದ ಮತದಾರರಾಗಿದ್ದು, ಈ ಸಾರಿಯ ಚುನಾವಣೆಯಲ್ಲಿ ಮತದಾನ ಮಾಡಿಲ್ಲ ಅಂತ ಪತ್ರಿಕೆಗಳಲ್ಲಿ ವರದಿಯಾಗಿದೆ ಹಾಗೂ ಇದನ್ನ ಆ ಕ್ಷೇತ್ರದ ಉಸ್ತುವಾರಿ ವಹಿಸಿದ್ದ ಚುನಾವಣಾ ಅಧಿಕಾರಿ ಸಹ ನಿಜವೆಂದು ಹೇಳಿದ್ದಾರೆ.

ಮುಖ್ಯವಾದ ವಿಷ್ಯ ಏನಪ್ಪಾ ಅಂದ್ರೆ ಡಾ. ಮನಮೋಹನ್ ಸಿಂಗ್, ಅಸ್ಸಾಂನಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಬಂದಿದ್ದಾರೆ ಹಾಗೂ ಹಿಂದೆಯೂ ಆಯ್ಕೆಯಾಗಿದ್ದರು. ಮತದಾನ ಪ್ರತಿಯೊಬ್ಬ ನಾಗರೀಕನ ಮೂಲ ಕರ್ತವ್ಯ ಎಂದು ನಮ್ಮ ಸಂವಿಧಾನದಲ್ಲಿ ಹೇಳಲಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಒಂದು ಜನಪ್ರಿಯ ಸರ್ಕಾರವನ್ನು ಆರಿಸಲು ಪ್ರತಿಯೊಬ್ಬ ಪ್ರಜೆಗೂ ನೀಡಲಾಗಿರುವ ಪವಿತ್ರ ಹಕ್ಕು ಅನ್ನೋದನ್ನ ನಮ್ಮ ದೇಶದ ಪ್ರಧಾನ ಮಂತ್ರಿಗಳು ಮರೆತು ಬಿಟ್ಟಿದ್ದಾರೆಯೇ?? ಪ್ರಜ್ಞಾವಂತ ಜನರು ಚುನಾವಣೆಯಿಂದ ವಿಮುಖರಾಗುತ್ತಿದ್ದಾರೆ ಎಂದು ಹೇಳುತ್ತಿರವ ಈ ಸಮಯದಲ್ಲಿ ಒಬ್ಬ ರಾಜಕಾರಣಿ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿರುವ ಮನಮೋಹನ್ ಸಿಂಗ್ ಅವರಿಂದ ಇಂತಹ ನಡೆ ಸರಿಯಾದುದಲ್ಲ.
ರಾಜ್ಯಸಭೆ ಸೀಟ್ ಬೇಕು ಆದರೆ ರಾಜ್ಯ ಬೇಡಾ:
ಇಲ್ಲಿ ಮನಮೋಹನ್ ಸಿಂಗ್ ಮತದಾನ ಮಾಡಿಲ್ಲ ಅನ್ನೋದು ಒಂದು ಕಡೆಯಾದರೆ, ವಿವಿಧ ರಾಜ್ಯಗಳ ರಾಜ್ಯಸಭಾ ಸೀಟುಗಳು ಹೊರ ರಾಜ್ಯದವರನ್ನು ಹಿಂಬಾಗಿಲ ಮೂಲಕ ರಾಜ್ಯಸಭೆಗೆ ಕಳಿಸುತ್ತಿರುವ ಕ್ರಿಯೆ ಗಾಬರಿ ಹುಟ್ಟಿಸುವಂತಹುದು. ರಾಷ್ಟ್ರೀಯ ರಾಜಕೀಯ ಪಕ್ಷಗಳು ತಮ್ಮ ನಾಯಕರನ್ನು ಓಲೈಸಲೋ ಅಥವಾ ಬೇಕಾದವರನ್ನು ಮೇಲ್ಮನೆಗೆ ಕಳುಹಿಸಲು ಅಮೂಲ್ಯವಾದ ರಾಜ್ಯಸಭಾ ಸೀಟುಗಳನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ರಾಜ್ಯಸಭೆಗೆ ಕಳುಹಿಸುವ ಪ್ರತಿನಿಧಿಗಳಿಗೆ ರಾಜ್ಯದ ಬಗ್ಗೆ ಏನೆಂದರೇ ಎನೂ ಗೊತ್ತಿರುವುದಿಲ್ಲಾ ಅಥವಾ ರಾಜ್ಯದ ಬಗ್ಗೆ ಕಾಳಜಿವಹಿಸಬೇಕೆಂದು ಅನ್ನಿಸದವರನ್ನು ಆರಿಸಿ ಕಳುಹಿಸುತ್ತಾರೆ. ಈ ಮೂಲಕ ರಾಜ್ಯಸಭೆಯ ಮೂಲ ಉದ್ದೇಶವನ್ನೇ ಹಾಳುಮಾಡುತ್ತಿದ್ದಾರೆ. ಇದಕ್ಕೆ ಉದಾಹರಣೆಯಾಗಿ ನಮ್ಮ ರಾಜ್ಯದಲ್ಲೇ ಬಿಜೆಪಿಯಿಂದ ವೆಂಕಯ್ಯ ನಾಯ್ಡು, ಉದ್ಯಮಿ ರಾಜೀವ್ ಚಂದ್ರಶೇಖರ್, ಚಿತ್ರನಟಿ ಹೇಮಾ ಮಾಲಿನಿಯನ್ನು ಆರಿಸಿ ಕಳುಹಿಸಿದರೆ, ಜೆಡಿಎಸ್ ಪಕ್ಷ ಎಂ.ಎಂ. ರಾಮಸ್ವಾಮಿ ಎಂಬ ಹೊರನಾಡಿನ ಉದ್ಯಮಿಯನ್ನು ರಾಜ್ಯಸಭೆಗೆ ಆರಿಸಿ ಕಳುಹಿಸಿದೆ.
ಇಲ್ಲಿಂದ ಆರಿಸಿ ಹೋಗುವ ಯಾವ ಹೊರ ರಾಜ್ಯದ ರಾಜ್ಯಸಭಾ ಸದಸ್ಯರು ನಮ್ಮ ನಾಡಿಗಾಗಿ ದುಡಿದಿದ್ದಾರೆ? ನಾಡಿನ ಯಾವ ಸಮಸ್ಯೆಗೆ ಪರಿಹಾರ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ? ಯಾವ ಅಂತರ್ ರಾಜ್ಯ ಸಮಸ್ಯೆಗಳನ್ನು ಪರಿಹರಿಸಿದ್ದಾರೆ? ಎಷ್ಟು ಸರ್ತಿ ನಾಡಿನ ಪರವಾಗಿ ರಾಜ್ಯ ಸಭೆಯಲ್ಲಿ ಧ್ವನಿ ಎತ್ತಿದ್ದಾರೆ? ಇವಕೆಲ್ಲ ಬಹುಷಃ ಇಲ್ಲಾ ಅನ್ನುವ ಉತ್ತರವೇ ದೊರೆಯುತ್ತದೆ. ಹೈಕಮಾಂಡಿನ ಧಣಿಗಳನ್ನು ತಣಿಸುವಲ್ಲೇ ನಿರತರಾಗಿರುವ ಜನರಿಂದ ನಮ್ಮ ನಾಡಿಗೆ ಆಗಿರುವ ಉಪಯೋಗವಾದರು ಏನು???? ಇದಕೆಲ್ಲ ಪರಿಹಾರ ನಮ್ಮ ಜನರ ಕೈಯಲ್ಲೇ ಇದೇ ಅನ್ನೋದನ್ನ ಮತ್ತೆ ಹೇಳಬೇಕಾಗಿಲ್ಲ ಅಲ್ವೆ?

ಮುಖ್ಯವಾದ ವಿಷ್ಯ ಏನಪ್ಪಾ ಅಂದ್ರೆ ಡಾ. ಮನಮೋಹನ್ ಸಿಂಗ್, ಅಸ್ಸಾಂನಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಬಂದಿದ್ದಾರೆ ಹಾಗೂ ಹಿಂದೆಯೂ ಆಯ್ಕೆಯಾಗಿದ್ದರು. ಮತದಾನ ಪ್ರತಿಯೊಬ್ಬ ನಾಗರೀಕನ ಮೂಲ ಕರ್ತವ್ಯ ಎಂದು ನಮ್ಮ ಸಂವಿಧಾನದಲ್ಲಿ ಹೇಳಲಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಒಂದು ಜನಪ್ರಿಯ ಸರ್ಕಾರವನ್ನು ಆರಿಸಲು ಪ್ರತಿಯೊಬ್ಬ ಪ್ರಜೆಗೂ ನೀಡಲಾಗಿರುವ ಪವಿತ್ರ ಹಕ್ಕು ಅನ್ನೋದನ್ನ ನಮ್ಮ ದೇಶದ ಪ್ರಧಾನ ಮಂತ್ರಿಗಳು ಮರೆತು ಬಿಟ್ಟಿದ್ದಾರೆಯೇ?? ಪ್ರಜ್ಞಾವಂತ ಜನರು ಚುನಾವಣೆಯಿಂದ ವಿಮುಖರಾಗುತ್ತಿದ್ದಾರೆ ಎಂದು ಹೇಳುತ್ತಿರವ ಈ ಸಮಯದಲ್ಲಿ ಒಬ್ಬ ರಾಜಕಾರಣಿ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿರುವ ಮನಮೋಹನ್ ಸಿಂಗ್ ಅವರಿಂದ ಇಂತಹ ನಡೆ ಸರಿಯಾದುದಲ್ಲ.
ರಾಜ್ಯಸಭೆ ಸೀಟ್ ಬೇಕು ಆದರೆ ರಾಜ್ಯ ಬೇಡಾ:
ಇಲ್ಲಿ ಮನಮೋಹನ್ ಸಿಂಗ್ ಮತದಾನ ಮಾಡಿಲ್ಲ ಅನ್ನೋದು ಒಂದು ಕಡೆಯಾದರೆ, ವಿವಿಧ ರಾಜ್ಯಗಳ ರಾಜ್ಯಸಭಾ ಸೀಟುಗಳು ಹೊರ ರಾಜ್ಯದವರನ್ನು ಹಿಂಬಾಗಿಲ ಮೂಲಕ ರಾಜ್ಯಸಭೆಗೆ ಕಳಿಸುತ್ತಿರುವ ಕ್ರಿಯೆ ಗಾಬರಿ ಹುಟ್ಟಿಸುವಂತಹುದು. ರಾಷ್ಟ್ರೀಯ ರಾಜಕೀಯ ಪಕ್ಷಗಳು ತಮ್ಮ ನಾಯಕರನ್ನು ಓಲೈಸಲೋ ಅಥವಾ ಬೇಕಾದವರನ್ನು ಮೇಲ್ಮನೆಗೆ ಕಳುಹಿಸಲು ಅಮೂಲ್ಯವಾದ ರಾಜ್ಯಸಭಾ ಸೀಟುಗಳನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ರಾಜ್ಯಸಭೆಗೆ ಕಳುಹಿಸುವ ಪ್ರತಿನಿಧಿಗಳಿಗೆ ರಾಜ್ಯದ ಬಗ್ಗೆ ಏನೆಂದರೇ ಎನೂ ಗೊತ್ತಿರುವುದಿಲ್ಲಾ ಅಥವಾ ರಾಜ್ಯದ ಬಗ್ಗೆ ಕಾಳಜಿವಹಿಸಬೇಕೆಂದು ಅನ್ನಿಸದವರನ್ನು ಆರಿಸಿ ಕಳುಹಿಸುತ್ತಾರೆ. ಈ ಮೂಲಕ ರಾಜ್ಯಸಭೆಯ ಮೂಲ ಉದ್ದೇಶವನ್ನೇ ಹಾಳುಮಾಡುತ್ತಿದ್ದಾರೆ. ಇದಕ್ಕೆ ಉದಾಹರಣೆಯಾಗಿ ನಮ್ಮ ರಾಜ್ಯದಲ್ಲೇ ಬಿಜೆಪಿಯಿಂದ ವೆಂಕಯ್ಯ ನಾಯ್ಡು, ಉದ್ಯಮಿ ರಾಜೀವ್ ಚಂದ್ರಶೇಖರ್, ಚಿತ್ರನಟಿ ಹೇಮಾ ಮಾಲಿನಿಯನ್ನು ಆರಿಸಿ ಕಳುಹಿಸಿದರೆ, ಜೆಡಿಎಸ್ ಪಕ್ಷ ಎಂ.ಎಂ. ರಾಮಸ್ವಾಮಿ ಎಂಬ ಹೊರನಾಡಿನ ಉದ್ಯಮಿಯನ್ನು ರಾಜ್ಯಸಭೆಗೆ ಆರಿಸಿ ಕಳುಹಿಸಿದೆ.
ಇಲ್ಲಿಂದ ಆರಿಸಿ ಹೋಗುವ ಯಾವ ಹೊರ ರಾಜ್ಯದ ರಾಜ್ಯಸಭಾ ಸದಸ್ಯರು ನಮ್ಮ ನಾಡಿಗಾಗಿ ದುಡಿದಿದ್ದಾರೆ? ನಾಡಿನ ಯಾವ ಸಮಸ್ಯೆಗೆ ಪರಿಹಾರ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ? ಯಾವ ಅಂತರ್ ರಾಜ್ಯ ಸಮಸ್ಯೆಗಳನ್ನು ಪರಿಹರಿಸಿದ್ದಾರೆ? ಎಷ್ಟು ಸರ್ತಿ ನಾಡಿನ ಪರವಾಗಿ ರಾಜ್ಯ ಸಭೆಯಲ್ಲಿ ಧ್ವನಿ ಎತ್ತಿದ್ದಾರೆ? ಇವಕೆಲ್ಲ ಬಹುಷಃ ಇಲ್ಲಾ ಅನ್ನುವ ಉತ್ತರವೇ ದೊರೆಯುತ್ತದೆ. ಹೈಕಮಾಂಡಿನ ಧಣಿಗಳನ್ನು ತಣಿಸುವಲ್ಲೇ ನಿರತರಾಗಿರುವ ಜನರಿಂದ ನಮ್ಮ ನಾಡಿಗೆ ಆಗಿರುವ ಉಪಯೋಗವಾದರು ಏನು???? ಇದಕೆಲ್ಲ ಪರಿಹಾರ ನಮ್ಮ ಜನರ ಕೈಯಲ್ಲೇ ಇದೇ ಅನ್ನೋದನ್ನ ಮತ್ತೆ ಹೇಳಬೇಕಾಗಿಲ್ಲ ಅಲ್ವೆ?
ಸೋಮವಾರ, ಏಪ್ರಿಲ್ 11, 2011
ರಾಷ್ಟ್ರೀಯ ಪಕ್ಷಗಳ ಒಡೆದು ಆಳುವ ನೀತಿ
ಕಳೆದ ಎರಡು ವಾರಗಳಲ್ಲಿ ನಡೆದಿರುವ ಸುದ್ದಿಗಳ ಬಗ್ಗೆ ನಿಮ್ಮ ಗಮನ ಹರಿಸಲು ಇಷ್ಟಪಡುತ್ತೇನೆ. ಪತ್ರಿಕೆಗಳಲ್ಲಿ ಕೇವಲ ಸುದ್ದಿ ಎನ್ನುವಂತೆ ಇವುಗಳನ್ನು ಬಿತ್ತರಿಸಲಾಯಿತು, ಆದರೆ ಇವುಗಳ ಬಗ್ಗೆ ಎಲ್ಲೂ ಚರ್ಚೆಯಾಗಿಲ್ಲ.
ಮರುಚುನಾವಣೆ ಹಾಗೂ ತೆಲುಗಿನಲ್ಲಿ ಭಾಷಣ:
ಮೊನ್ನೆ ನಡೆದ ಮರುಚುನಾವಣೆಯ ಪ್ರಚಾರಕ್ಕಾಗಿ ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡವು, ಅದಕ್ಕಾಗಿಯೇ ಹೊರರಾಜ್ಯದ ಚಲನಚಿತ್ರ ನಟ/ನಟಿಯರನ್ನು ಕರೆಸಿದ್ದವು. ಮತದಾರನನ್ನು ಓಲೈಸುವ ಭರದಲ್ಲಿ ನಮ್ಮ ರಾಜಕೀಯ ಪಕ್ಷಗಳು ಮಾಡುತ್ತಿರುವ ತಪ್ಪುಗಳು ಮಾತ್ರ ಬಹಳ ದೊಡ್ಡದಾಗಿವೆ. ಬಂಗಾರ ಪೇಟೆಯಲ್ಲಿ ನಡೆದ ಉಪಚುನಾವಣೆಗಾಗಿ ನಡೆಸಿದ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷ ತೆಲಗು ಚಿತ್ರನಟ ಚಿರಂಜೀವಿಯನ್ನು ಬಳಸಿಕೊಂಡಿತ್ತು. ಅವರು ಸಹ ಭರ್ಜರಿಯಾಗಿ ತೆಲುಗಿನಲ್ಲಿ ಭಾಷಣ ಮಾಡಿ ಹೊರಟು ಹೋದರು. ಇದರಲ್ಲಿ ತಪ್ಪೇನು ಅಂತೀರಾ? ಮತದಾರನನ್ನು ಓಲೈಸುವ ಭರದಲ್ಲಿ ಕರ್ನಾಟಕದ ವಿವಿಧ ಭಾಷಿಕರಲ್ಲಿ ಒಡಕುಂಟು ಮಾಡಲಾಗುತ್ತಿದೆ. ಮೊನ್ನೆ ನಡೆದಿದ್ದು ಸಹ ಅದೇ, ಹಲವು ಶತಮಾನ ಅಥವಾ ಹಲವು ದಶಕಗಳಿಂದ ಇಲ್ಲಿ ನೆಲೆಸಿರುವ ತೆಲುಗು ಭಾಷಿಕರು ಕನ್ನಡದವರೇ ಆಗಿಹೋಗಿದ್ದಾರೆ. ಆದರೆ ನೀವು ತೆಲುಗರು ನೀವು ಕನ್ನಡಿಗರಲ್ಲಾ ಅಂತಾ ತೋರಿಸೋ ಪ್ರಯತ್ನಗಳೇ ಚಿರಂಜೀವಿ ಯಂತಹ ತೆಲುಗು ನಟರನ್ನು ಕರೆದುಕೊಂಡು ಬಂದು ಕರ್ನಾಟಕದಲ್ಲಿ ಭಾಷಣ ಮಾಡಿಸುವುದು. ಕರ್ನಾಟಕದ ಜನರನ್ನ ಓಲೈಸಲು ಆಂಧ್ರಪ್ರದೇಶದ ಕರಾವಳಿ ತೀರದ ಒಬ್ಬ ನಟ ಬಂದು ನೀವು ಕನ್ನಡಿಗರಲ್ಲಾ ಎಂದು ಸಂದೇಶ ನೀಡಿಸುವ ಕೆಲಸ ಮಾಡುತ್ತಿರುವ ಪಕ್ಷಗಳು ಮಾಡುತ್ತಿರುವುದಾದರು ಏನು ಅನ್ನೋದನ್ನ ತಾವೇ ಪ್ರಶ್ನಿಸಿಕೊಳ್ಳಲಿ.
ಹಾಗಂತ ಮತದಾರರೇನು ದಡ್ಡರಲ್ಲ, ಚಿರಂಜೀವಿ ಕೇವಲ ಒಬ್ಬ ನಟ ಅನ್ನೋ ಕಾರಣಕ್ಕೆ ಬಂದು ಸೇರುತ್ತಾರೆಯೇ ಹೊರತು, ಆವರು ಮಾಡುವ ತೆಲುಗು ಭಾಷಣ ಕೇಳಿ, ಕಾಂಗ್ರೆಸ್ ಪಕ್ಷಕ್ಕೆ ಓಟ್ ನೀಡುತ್ತಾರೆ ಅನ್ನೋದು ಹಾಸ್ಯಾಸ್ಪದ ಅನ್ನಿಸುತ್ತೆ. ನಮ್ಮ ರಾಜ್ಯದ ಏಳಿಗೆಯನ್ನೇ ಮರೆತಿರುವ ರಾಷ್ಟ್ರೀಯ ಪಕ್ಷಗಳು ಕನಿಷ್ಠ ಪಕ್ಷ ಸಾಮರಸ್ಯದಿಂದ ಬದುಕುತ್ತಿರುವ ಜನರನ್ನು ಭಾಷೆಯ ಹೆಸರಲ್ಲಿ ಒಡೆದು ಓಟ್ ಬ್ಯಾಂಕ್ ಗಳನ್ನಾಗಿ ಮಾಡದಿದ್ದರೆ ಅಷ್ಟರ ಮಟ್ಟಿಗೆ ಜನರಿಗೆ ಒಳಿತನ್ನ ಮಾಡುತ್ತಿದ್ದಾರೆ ಎಂದು ಅಂದುಕೊಳ್ಳೋಣ.
ಕನ್ನಡಿಗ ಮೇಯರ್ ಗೆ ಚಪ್ಪಲಿ ತೋರಿಸಿದ್ದ ಮಹಿಳೆ ಈಗ ಬೆಳಗಾವಿ ಮೇಯರ್:
ಬಹುಷಃ ಇಂತಹ ಘಟನೆಗಳು ಕರ್ನಾಟಕದಲ್ಲಿ ಮಾತ್ರ ನಡೆಯುವುದಕ್ಕೆ ಸಾಧ್ಯ ಅನ್ನಿಸುತ್ತೆ. ಎಂಇಎಸ್ ನಂತಹ ಕೆಟ್ಟ ಸಂಘಟನೆ ಹಲವಾರು ದಶಕಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ತನ್ನ ಹಿತಾಸಕ್ತಿಗಾಗಿ ಕನ್ನಡ ಹಾಗೂ ಮರಾಠಿಗರಲ್ಲಿ ವಿಷದ ಬೀಜ ಬಿತ್ತುತ್ತಾ ಬಂದಿದೆ, ಇದರ ಜೊತೆ ಜೊತೆಗೆ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ತರಲೆ ಮಾಡುತ್ತಾ ತನ್ನ ಅಸ್ತಿತ್ವ ಕಾಪಾಡಿಕೊಂಡು ಬಂದಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರೇ ಸಂಘಟನೆಗಳು ನಡೆಸಿದ ನಿರಂತರ ಹೋರಾಟದಿಂದಾಗಿ ಎಂಇಎಸ್ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದಿದೆ. ಈ ಸಂಘಟನೆಗೆ ಸೇರಿದ ಕೆಲವು ಸದಸ್ಯರು ಈ ಸರ್ತಿಯ ಮಹಾನಗರ ಪಾಲಿಕೆಯಲ್ಲಿ ಗೆದ್ದು ಬಂದಿದೆ, ಗಮನಾರ್ಹ ಸಂಗತಿ ಎಂದರೆ ಈ ಸಂಖ್ಯೆ ತನ್ನ ಪಕ್ಷದ ಅಭ್ಯರ್ಥಿಯನ್ನು ಮೇಯರ್ ನನ್ನಾಗಿ ಮಾಡುವಷ್ಟು ದೊಡ್ಡದಲ್ಲ.
ಈ ಎಂಇಎಸ್ ಸಂಘಟನೆಯ ಮಹಿಳೆ ಈಗಾ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಆಗಿ ವಿರೋಧವಿಲ್ಲದೆ ಆಯ್ಕೆಯಾಗಿದ್ದಾರೆ. ದುರಂತವೆಂದರೆ ಈ ಮಹಿಳೆ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನದ ತಯಾರಿಯ ಸಭೆಯಲ್ಲಿ ಆಗಿನ ಮೇಯರ್ ಗೆ ಚಪ್ಪಲಿ ತೋರಿಸಿ, ಸಮ್ಮೇಳನ ನಡೆಸಬಾರದು ಎಂದು ತರಲೆ ಮಾಡಿದ್ದರು. ಎಂಇಎಸ್ ಸಂಘಟನೆಯ ಈ ಮಹಿಳೆ ಈಗ ಮೇಯರ್ ಆಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾರಣ ಎಂಇಎಸ್ ಗೆ ತನ್ನ ಅಭ್ಯರ್ಥಿಯನ್ನು ಮೇಯರ್ ಮಾಡುವಷ್ಟು ಸಂಖ್ಯಾಬಲವಿಲ್ಲ, ಹಾಗಾಗಿ ನಮ್ಮ ರಾಜ್ಯದ ರಾಜಕೀಯ ಪಕ್ಷಗಳ ಬೆಂಬಲವಿಲ್ಲದೆ ಅಥವಾ ಅಲ್ಲಿನ ರಾಜಕೀಯ ನಾಯಕರ ಬೆಂಬಲವಿಲ್ಲದೆ ಮೇಯರ್ ಆಗೋದಕ್ಕೆ ಸಾಧ್ಯವಾ??? ಇದು ಬೆಳಗಾವಿ ಜಿಲ್ಲೆಯಲ್ಲಿ ಇರುವ ತಾಲುಕೂ ಹಾಗೂ ಜಿಲ್ಲಾ ಪಂಚಾಯತ್ ಗಳಲ್ಲಿ ಅಧಿಕಾರ ಸ್ಥಾಪಿಸಲು ರಾಜಕೀಯ ಪಕ್ಷಗಳು ಸಹಾಯ ಮಾಡಿರಬಹುದಾ ಅನ್ನೋದು ಪ್ರಶ್ನೆ?
ಇದೇ ಎಂಇಎಸ್ ಸಂಘಟನೆಯ ಬಗ್ಗೆ ಏಪ್ರಿಲ್ ೧೦ನೇ ತಾರೀಕು ವಿ.ಕ ದಲ್ಲಿ ಒಂದು ವರದಿ ಪ್ರಕಟವಾಗಿದೆ. ವರದಿಯ ಸಾರಾಂಶವೆಂದರೆ ಬೆಳಗಾವಿ ಜಿಲ್ಲೆಯಲ್ಲಿ ಮಾಡಲಾಗುತ್ತಿರುವ ಕಳಸಾ ನಾಲಾ ಯೋಜನೆಯ ಬಗ್ಗೆ ವರದಿ ತಯಾರಿಸಿ, ಗೋವಾ ಸರ್ಕಾರಕ್ಕೆ ನೀಡಿ ಯೋಜನೆ ಜಾರಿಗೆ ಬರದಂತೆ ತಡೆಯುವುದು. ಇಂತ ಹೀನ ಕೆಲಸಗಳಲ್ಲಿ ತೊಡಗಿರುವ ಎಂಇಎಸ್ ಸಂಘಟನೆಯಿಂದ ನಮ್ಮ ನಾಡಿಗೆ ಮಾರಕ. ಇಂತಹ ಸಂಘಟನೆಗಳೊಂದಿಗೆ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಹಾಗೂ ಮಹಾನಗರ ಪಾಲಿಕೆಯಲ್ಲಿ(??) ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ನಮ್ಮ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥವನ್ನಲ್ಲದೇ ರಾಜ್ಯದ ಬಗ್ಗೆಯೂ ಒಂದಷ್ಟೂ ಕಾಳಜಿ ತೋರಿಸಬೇಕು. ಇಲ್ಲದಿದ್ದರೆ ಜನರೇ ಇವರಿಗೆಲ್ಲಾ ಸರಿಯಾಗಿ ಪಾಠ ಕಲಿಸುತ್ತಾರೆ ಅನ್ನೋದು ನಮ್ಮ ರಾಜಕೀಯ ಪಕ್ಷಗಳು ಅರಿತುಕೊಳ್ಳಬೇಕು.
ಮರುಚುನಾವಣೆ ಹಾಗೂ ತೆಲುಗಿನಲ್ಲಿ ಭಾಷಣ:
ಮೊನ್ನೆ ನಡೆದ ಮರುಚುನಾವಣೆಯ ಪ್ರಚಾರಕ್ಕಾಗಿ ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡವು, ಅದಕ್ಕಾಗಿಯೇ ಹೊರರಾಜ್ಯದ ಚಲನಚಿತ್ರ ನಟ/ನಟಿಯರನ್ನು ಕರೆಸಿದ್ದವು. ಮತದಾರನನ್ನು ಓಲೈಸುವ ಭರದಲ್ಲಿ ನಮ್ಮ ರಾಜಕೀಯ ಪಕ್ಷಗಳು ಮಾಡುತ್ತಿರುವ ತಪ್ಪುಗಳು ಮಾತ್ರ ಬಹಳ ದೊಡ್ಡದಾಗಿವೆ. ಬಂಗಾರ ಪೇಟೆಯಲ್ಲಿ ನಡೆದ ಉಪಚುನಾವಣೆಗಾಗಿ ನಡೆಸಿದ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷ ತೆಲಗು ಚಿತ್ರನಟ ಚಿರಂಜೀವಿಯನ್ನು ಬಳಸಿಕೊಂಡಿತ್ತು. ಅವರು ಸಹ ಭರ್ಜರಿಯಾಗಿ ತೆಲುಗಿನಲ್ಲಿ ಭಾಷಣ ಮಾಡಿ ಹೊರಟು ಹೋದರು. ಇದರಲ್ಲಿ ತಪ್ಪೇನು ಅಂತೀರಾ? ಮತದಾರನನ್ನು ಓಲೈಸುವ ಭರದಲ್ಲಿ ಕರ್ನಾಟಕದ ವಿವಿಧ ಭಾಷಿಕರಲ್ಲಿ ಒಡಕುಂಟು ಮಾಡಲಾಗುತ್ತಿದೆ. ಮೊನ್ನೆ ನಡೆದಿದ್ದು ಸಹ ಅದೇ, ಹಲವು ಶತಮಾನ ಅಥವಾ ಹಲವು ದಶಕಗಳಿಂದ ಇಲ್ಲಿ ನೆಲೆಸಿರುವ ತೆಲುಗು ಭಾಷಿಕರು ಕನ್ನಡದವರೇ ಆಗಿಹೋಗಿದ್ದಾರೆ. ಆದರೆ ನೀವು ತೆಲುಗರು ನೀವು ಕನ್ನಡಿಗರಲ್ಲಾ ಅಂತಾ ತೋರಿಸೋ ಪ್ರಯತ್ನಗಳೇ ಚಿರಂಜೀವಿ ಯಂತಹ ತೆಲುಗು ನಟರನ್ನು ಕರೆದುಕೊಂಡು ಬಂದು ಕರ್ನಾಟಕದಲ್ಲಿ ಭಾಷಣ ಮಾಡಿಸುವುದು. ಕರ್ನಾಟಕದ ಜನರನ್ನ ಓಲೈಸಲು ಆಂಧ್ರಪ್ರದೇಶದ ಕರಾವಳಿ ತೀರದ ಒಬ್ಬ ನಟ ಬಂದು ನೀವು ಕನ್ನಡಿಗರಲ್ಲಾ ಎಂದು ಸಂದೇಶ ನೀಡಿಸುವ ಕೆಲಸ ಮಾಡುತ್ತಿರುವ ಪಕ್ಷಗಳು ಮಾಡುತ್ತಿರುವುದಾದರು ಏನು ಅನ್ನೋದನ್ನ ತಾವೇ ಪ್ರಶ್ನಿಸಿಕೊಳ್ಳಲಿ.
ಹಾಗಂತ ಮತದಾರರೇನು ದಡ್ಡರಲ್ಲ, ಚಿರಂಜೀವಿ ಕೇವಲ ಒಬ್ಬ ನಟ ಅನ್ನೋ ಕಾರಣಕ್ಕೆ ಬಂದು ಸೇರುತ್ತಾರೆಯೇ ಹೊರತು, ಆವರು ಮಾಡುವ ತೆಲುಗು ಭಾಷಣ ಕೇಳಿ, ಕಾಂಗ್ರೆಸ್ ಪಕ್ಷಕ್ಕೆ ಓಟ್ ನೀಡುತ್ತಾರೆ ಅನ್ನೋದು ಹಾಸ್ಯಾಸ್ಪದ ಅನ್ನಿಸುತ್ತೆ. ನಮ್ಮ ರಾಜ್ಯದ ಏಳಿಗೆಯನ್ನೇ ಮರೆತಿರುವ ರಾಷ್ಟ್ರೀಯ ಪಕ್ಷಗಳು ಕನಿಷ್ಠ ಪಕ್ಷ ಸಾಮರಸ್ಯದಿಂದ ಬದುಕುತ್ತಿರುವ ಜನರನ್ನು ಭಾಷೆಯ ಹೆಸರಲ್ಲಿ ಒಡೆದು ಓಟ್ ಬ್ಯಾಂಕ್ ಗಳನ್ನಾಗಿ ಮಾಡದಿದ್ದರೆ ಅಷ್ಟರ ಮಟ್ಟಿಗೆ ಜನರಿಗೆ ಒಳಿತನ್ನ ಮಾಡುತ್ತಿದ್ದಾರೆ ಎಂದು ಅಂದುಕೊಳ್ಳೋಣ.
ಕನ್ನಡಿಗ ಮೇಯರ್ ಗೆ ಚಪ್ಪಲಿ ತೋರಿಸಿದ್ದ ಮಹಿಳೆ ಈಗ ಬೆಳಗಾವಿ ಮೇಯರ್:
ಬಹುಷಃ ಇಂತಹ ಘಟನೆಗಳು ಕರ್ನಾಟಕದಲ್ಲಿ ಮಾತ್ರ ನಡೆಯುವುದಕ್ಕೆ ಸಾಧ್ಯ ಅನ್ನಿಸುತ್ತೆ. ಎಂಇಎಸ್ ನಂತಹ ಕೆಟ್ಟ ಸಂಘಟನೆ ಹಲವಾರು ದಶಕಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ತನ್ನ ಹಿತಾಸಕ್ತಿಗಾಗಿ ಕನ್ನಡ ಹಾಗೂ ಮರಾಠಿಗರಲ್ಲಿ ವಿಷದ ಬೀಜ ಬಿತ್ತುತ್ತಾ ಬಂದಿದೆ, ಇದರ ಜೊತೆ ಜೊತೆಗೆ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ತರಲೆ ಮಾಡುತ್ತಾ ತನ್ನ ಅಸ್ತಿತ್ವ ಕಾಪಾಡಿಕೊಂಡು ಬಂದಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರೇ ಸಂಘಟನೆಗಳು ನಡೆಸಿದ ನಿರಂತರ ಹೋರಾಟದಿಂದಾಗಿ ಎಂಇಎಸ್ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದಿದೆ. ಈ ಸಂಘಟನೆಗೆ ಸೇರಿದ ಕೆಲವು ಸದಸ್ಯರು ಈ ಸರ್ತಿಯ ಮಹಾನಗರ ಪಾಲಿಕೆಯಲ್ಲಿ ಗೆದ್ದು ಬಂದಿದೆ, ಗಮನಾರ್ಹ ಸಂಗತಿ ಎಂದರೆ ಈ ಸಂಖ್ಯೆ ತನ್ನ ಪಕ್ಷದ ಅಭ್ಯರ್ಥಿಯನ್ನು ಮೇಯರ್ ನನ್ನಾಗಿ ಮಾಡುವಷ್ಟು ದೊಡ್ಡದಲ್ಲ.
ಈ ಎಂಇಎಸ್ ಸಂಘಟನೆಯ ಮಹಿಳೆ ಈಗಾ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಆಗಿ ವಿರೋಧವಿಲ್ಲದೆ ಆಯ್ಕೆಯಾಗಿದ್ದಾರೆ. ದುರಂತವೆಂದರೆ ಈ ಮಹಿಳೆ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನದ ತಯಾರಿಯ ಸಭೆಯಲ್ಲಿ ಆಗಿನ ಮೇಯರ್ ಗೆ ಚಪ್ಪಲಿ ತೋರಿಸಿ, ಸಮ್ಮೇಳನ ನಡೆಸಬಾರದು ಎಂದು ತರಲೆ ಮಾಡಿದ್ದರು. ಎಂಇಎಸ್ ಸಂಘಟನೆಯ ಈ ಮಹಿಳೆ ಈಗ ಮೇಯರ್ ಆಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾರಣ ಎಂಇಎಸ್ ಗೆ ತನ್ನ ಅಭ್ಯರ್ಥಿಯನ್ನು ಮೇಯರ್ ಮಾಡುವಷ್ಟು ಸಂಖ್ಯಾಬಲವಿಲ್ಲ, ಹಾಗಾಗಿ ನಮ್ಮ ರಾಜ್ಯದ ರಾಜಕೀಯ ಪಕ್ಷಗಳ ಬೆಂಬಲವಿಲ್ಲದೆ ಅಥವಾ ಅಲ್ಲಿನ ರಾಜಕೀಯ ನಾಯಕರ ಬೆಂಬಲವಿಲ್ಲದೆ ಮೇಯರ್ ಆಗೋದಕ್ಕೆ ಸಾಧ್ಯವಾ??? ಇದು ಬೆಳಗಾವಿ ಜಿಲ್ಲೆಯಲ್ಲಿ ಇರುವ ತಾಲುಕೂ ಹಾಗೂ ಜಿಲ್ಲಾ ಪಂಚಾಯತ್ ಗಳಲ್ಲಿ ಅಧಿಕಾರ ಸ್ಥಾಪಿಸಲು ರಾಜಕೀಯ ಪಕ್ಷಗಳು ಸಹಾಯ ಮಾಡಿರಬಹುದಾ ಅನ್ನೋದು ಪ್ರಶ್ನೆ?
ಇದೇ ಎಂಇಎಸ್ ಸಂಘಟನೆಯ ಬಗ್ಗೆ ಏಪ್ರಿಲ್ ೧೦ನೇ ತಾರೀಕು ವಿ.ಕ ದಲ್ಲಿ ಒಂದು ವರದಿ ಪ್ರಕಟವಾಗಿದೆ. ವರದಿಯ ಸಾರಾಂಶವೆಂದರೆ ಬೆಳಗಾವಿ ಜಿಲ್ಲೆಯಲ್ಲಿ ಮಾಡಲಾಗುತ್ತಿರುವ ಕಳಸಾ ನಾಲಾ ಯೋಜನೆಯ ಬಗ್ಗೆ ವರದಿ ತಯಾರಿಸಿ, ಗೋವಾ ಸರ್ಕಾರಕ್ಕೆ ನೀಡಿ ಯೋಜನೆ ಜಾರಿಗೆ ಬರದಂತೆ ತಡೆಯುವುದು. ಇಂತ ಹೀನ ಕೆಲಸಗಳಲ್ಲಿ ತೊಡಗಿರುವ ಎಂಇಎಸ್ ಸಂಘಟನೆಯಿಂದ ನಮ್ಮ ನಾಡಿಗೆ ಮಾರಕ. ಇಂತಹ ಸಂಘಟನೆಗಳೊಂದಿಗೆ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಹಾಗೂ ಮಹಾನಗರ ಪಾಲಿಕೆಯಲ್ಲಿ(??) ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ನಮ್ಮ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥವನ್ನಲ್ಲದೇ ರಾಜ್ಯದ ಬಗ್ಗೆಯೂ ಒಂದಷ್ಟೂ ಕಾಳಜಿ ತೋರಿಸಬೇಕು. ಇಲ್ಲದಿದ್ದರೆ ಜನರೇ ಇವರಿಗೆಲ್ಲಾ ಸರಿಯಾಗಿ ಪಾಠ ಕಲಿಸುತ್ತಾರೆ ಅನ್ನೋದು ನಮ್ಮ ರಾಜಕೀಯ ಪಕ್ಷಗಳು ಅರಿತುಕೊಳ್ಳಬೇಕು.
ಶನಿವಾರ, ಮಾರ್ಚ್ 12, 2011
ನಾನು ಕಂಡಂತೆ ನಮ್ಮ ಬೆಳಗಾವಿ

ಉತ್ತರ ಕರ್ನಾಟಕದವನಾದ ನನಗೆ, ಬೆಳಗಾವಿ ನನ್ನ ಬೆಳವಣಿಗೆಯ ಒಂದು ಭಾಗವೇ ಅಂದರೆ ತಪ್ಪಲ್ಲ. ವರ್ಷಗಳು ಕಳೆದಂತೆ ನನ್ನ ಜೊತೆಯೇ ಬೆಳಗಾವಿಯ ಸ್ವರೂಪ ಬದಲಾಗುತ್ತಾ ಬಂತು. ಉತ್ತರ ಕರ್ನಾಟಕದ ಜಿಲ್ಲೆಗಳು ಶೈಕ್ಷಣಿಕವಾಗಿ ಬಹಳ ಹಿಂದುಳಿದಿವೆ. ಒಳ್ಳೆಯ ಓದು ಅಥವಾ ಉನ್ನತ ಶಿಕ್ಷಣ ಪಡೆಯಬೇಕೆಂದರೆ ನಾವು ಹುಬ್ಬಳ್ಳಿ, ಧಾರವಾಡ ಇಲ್ಲವೆಂದರೇ ಬೆಳಗಾವಿಗೆ ಹೋಗಿ ಓದಬೇಕು. ಪಿಯುಸಿ ಮುಗಿಸಿದ ಮೇಲೆ ಇಂಜಿನಿಯರಿಂಗ್ ಒದಲು ನನಗೆ ಸಿಕ್ಕಿದ್ದು ಬೆಳಗಾವಿಯ ಒಂದು ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ. ಅದು 2003-04ರ ಸಮಯ, ಕಾಲೇಜಿಗೆ ಸೇರಿಕೊಳ್ಳಲು ಇನ್ನು ಕೆಲವೇ ದಿನಗಳು ಬಾಕಿ ಇದ್ದವು, ಆಗ ಒಂದು ಕಡೆ ಖುಷಿಯಾಗುತ್ತಿದ್ದರೆ ಮತ್ತೊಂದು ಕಡೆ ಭಯ ಕಾಡುತ್ತಿತ್ತು ಕಾರಣ ನಾನು ಹೋಗುತ್ತಿರುವುದು ಬೆಳಗಾವಿ ಅನ್ನೋ ಊರಿಗೆ. ಜೊತೆಗೆ ಹಿಂದೆ ನನ್ನ ತಂದೆ ಇಲ್ಲಿ ಓದುತ್ತಿದ್ದಾಗ ಅವರಿಗೆ ಆಗಿದ್ದ ಅನೇಕ ಕಹಿ ಘಟನೆಗಳು. ಹೆದರಿಕೆಗೆ ಕಾರಣವಿದ್ದದ್ದು ಬೆಳಗಾವಿಯಲ್ಲಿ ಮರಾಠಿಗರು ಹೆಚ್ಚು, ಅಲ್ಲಿ ಕನ್ನಡ ಮಾತನಾಡುವವರನ್ನು ಹೊಡೆಯುತ್ತಾರೆ ಅನ್ನೋ ಭಯ, ಕಾರಣ ನನ್ನ ತಂದೆ 70ರ ದಶಕದಲ್ಲಿ ಇಲ್ಲಿ ಓದುತ್ತಿದ್ದಾಗ ಕನ್ನಡ ಮಾತನಾಡಿದ್ದಕ್ಕಾಗಿ ಮರಾಠಿಗರು ನನ್ನ ತಂದೆ ಜೊತೆ ಜಗಳವಾಡಿ ಅವರನ್ನ ಹೊಡೆದಿದ್ದರು ಕೂಡ.
ಬೆಳಗಾವಿಯಲ್ಲಿ ನನ್ನ ಅನುಭವ:
ಮೊದಲಬಾರಿಗೆ ಬೆಳಗಾವಿಯಲ್ಲಿ ಬಂದಿಳಿದಾಗ ನನಗೆ ಕಂಡಿದ್ದು ಅಲ್ಲಿದ್ದ ಮರಾಠಿಮಯ ವಾತಾವರಣ. ದಿನಸಿ ಅಂಗಡಿ, ಹೊಟೇಲ್ (ಉಡುಪಿ ಹೊಟೇಲ್ ಗಳನ್ನು ಹೊರತುಪಡಿಸಿ), ಆಟೋ ಓಡಿಸುವವರು ಹೀಗೆ ಎಲ್ಲಾ ಕಡೆ ಮರಾಠಿಯ ಪ್ರಭಾವ ಢಾಳಾಗಿ ಕಾಣಸಿಗುತ್ತಿತ್ತು. ಅಲ್ಲಿಗೆ ಹೋದ ಹೊಸದರಲ್ಲಿ ಈ ವಾತಾವರಣ ಬಹಳ ಇಕ್ಕಟ್ಟು ಅನ್ನಿಸುತ್ತಿತ್ತು. ಅನೇಕರಿಗೆ ಅಲ್ಲಿ ಕನ್ನಡ ಬಂದರೂ ಮಾತನಾಡುವುದಿಲ್ಲ, ಅವರಿಗೆ ಕನ್ನಡವೆಂದರೆ ಅಸಡ್ಡೆ, ಇನ್ನೂ ಸ್ವಲ್ಪ ಜನ ಕನ್ನಡವನ್ನು ಕಲಿಯುವದಕ್ಕೇ ಹೋಗಿರಲಿಲ್ಲ, ಕೆಲವು ಕನ್ನಡಿಗರು ಮರಾಠಿ ಮಾತನಾಡುವ ಪರಿಸ್ಥಿತಿ ಇತ್ತು. ಎಲ್ಲಾದಕ್ಕಿಂತ ಘೋರವೆಂದರೇ ನಮ್ಮ ರಾಜ್ಯೋತ್ಸವದ ದಿನ ಬೆಳಗಾವಿಯಲ್ಲಿ ಎಂಇಎಸ್ ನಂತಹ ಸಂಘಟನೆ ಕರಾಳ ದಿನವನ್ನ ಆಚರಿಸುತ್ತಿತ್ತು. ನಗರದ ಪ್ರಮುಖ ರಸ್ತೆಗಳಲ್ಲಿರುವ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುತ್ತಿತ್ತು. ನನ್ನ ಮುಂದೆಯೇ ಅನೇಕ ಅಂಗಡಿಗಳ ಮಾಲೀಕರು ಎಂಇಎಸ್ ನವರನ್ನ ಬೈದದ್ದಿದೆ. ಬೆಳಗಾವಿಯಿಂದ ಆರಿಸಿ ಬಂದಿದ್ದ ಎಂಇಎಸ್ ಶಾಸಕರು ನಮ್ಮ ವಿಧಾನಸಭೆಯಲ್ಲಿ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಕೂಗಾಡುತ್ತಿದ್ದರು, ನಮ್ಮ ರಾಜ್ಯದ ಉಳಿದ ಪ್ರತಿನಿಧಿಗಳು ನೋಡಿಕೊಂಡು ಸುಮ್ಮನಿರುತ್ತಿದ್ದರು. ಎಂಇಎಸ್ ಪ್ರಾಬಲ್ಯದ ನಗರಸಭೆ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಸಭೆಗಳಲ್ಲಿ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ನಿರ್ಣಯಗಳನ್ನು ತಗೆದುಕೊಳ್ಳುತ್ತಿದ್ದುದ್ದನ್ನು ಪತ್ರಿಕೆಗಳಲ್ಲಿ ಓದುತ್ತಿದ್ದೆ. ಯಾಕೆ ಸರ್ಕಾರ ಅಥವಾ ಬೆಳಗಾವಿ ಜಿಲ್ಲೆಯ ಇತರೆ ಪಕ್ಷದ ಜನಪ್ರತಿನಿಧಿಗಳು ಇದರ ವಿರುದ್ಧ ಧ್ವನಿ ಎತ್ತುತ್ತಿಲ್ಲಾ ಎಂದು ಸಿಟ್ಟು ಮಾಡಿಕೊಂಡಿದ್ದು ಇದೆ.....
ಬದಲಾದ ಬೆಳಗಾವಿಯ ವಾತಾವರಣ:
ಇವತ್ತು ನಾವುಗಳು ಬೆಳಗಾವಿಯಲ್ಲಿ ಕನ್ನಡ ವಾತಾವರಣ ನಿರ್ಮಾಣವಾಗಿರುವುದನ್ನು ಕಾಣುತ್ತಿದ್ದರೆ, ಅದಕ್ಕೆ ಮುಖ್ಯ ಕಾರಣ ಸರ್ಕಾರಕ್ಕಿಂತ ಹೆಚ್ಚಾಗಿ ದುಡಿದ್ದದ್ದು ಕನ್ನಡ ಪರ ಸಂಘಟನೆಗಳು, ಅದರಲ್ಲೂ ಮುಖ್ಯವಾಗಿ ಹೆಸರಿಸಬೇಕಾಗಿರುವಂತಹುದು ಕರ್ನಾಟಕ ರಕ್ಷಣಾ ವೇದಿಕೆ. ಸುಮಾರು 2005 ರಿಂದ ಬೆಳಗಾವಿಯಲ್ಲಿ ಕನ್ನಡದ ವಾತಾವರಣ ನಿರ್ಮಾಣ ಮಾಡಲು, ನಮ್ಮನ್ನು ಕಡೆಗಣಿಸಲಾಗಿದೆ ಅನ್ನೋ ಕೊರಗು ಇಟ್ಟುಕೊಂಡಿದ್ದಂತಹ ಕನ್ನಡಿಗರಿಗೆ ಮನಸ್ಥೈರ್ಯ ತುಂಬಿದ್ದು ಕರ್ನಾಟಕ ರಕ್ಷಣಾ ವೇದಿಕೆ ಮಾಡಿದ ಕೆಲಸಗಳಿಂದಾಗಿ. ಬೆಳಗಾವಿಯ ಮಹಾಪೌರರಾಗಿದ್ದ ವಿಜಯ್ ಮೋರೆ ಅವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಗೊತ್ತುವಳಿ ಮಂಡಿಸಿ ದೊಡ್ಡ ಗಲಾಟೆಗೆ ಕಾರಣವಾಗಿದ್ದರು. ಇದೇ ಸಮಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ವಿಜಯ್ ಮೋರೆ ಬೆಂಗಳೂರಿಗೆ ಬಂದಿದ್ದಾಗ ಅವರ ಮುಖಕ್ಕೆ ಮಸಿ ಬಳಿದು ಎಂಇಎಸ್ ನ ನಾಡವಿರೋಧಿ ನಿಲುವಿಗೆ ಪ್ರತಿಭಟನೆ ಸೂಚಿಸಿದ್ದರು. ಇದೇ ವಿಷಯ ಮುಂದೆ ಬೆಳಗಾವಿಯಲ್ಲಿ ಅನೇಕ ಬದಲಾವಣೆಗಳಿಗೆ ನಾಂದಿ ಹಾಡಿತು. ವಿಜಯ್ ಮೋರೆ ಪ್ರಕರಣದಲ್ಲಿ ಧರಂಸಿಂಗ್ ಸರ್ಕಾರದ ಮೇಲೆ ಒತ್ತಡ ತಂದ ಕರವೇ ಹೋರಾಟ ನಡೆಸಿ ಮಹಾನಗರ ಪಾಲಿಕೆ ವಿಸರ್ಜನೆಗೊಳ್ಳುವಂತೆ ಮಾಡಿತು. ಇದಾದ ನಂತರ ಬೆಳಗಾವಿಯಲ್ಲಿ ದಿವಂಗತ ಶ್ರೀ ಸಿ. ಅಶ್ವಥ್ ಅವರ ಸಾರಥ್ಯದಲ್ಲಿ ನಡೆದ "ಕನ್ನಡವೇ ಸತ್ಯ" ಕಾರ್ಯಕ್ರಮ ಕನ್ನಡಿಗರಲ್ಲಿ ಹೊಸ ಸಂಚಲನ ಮೂಡಿಸಿದ್ದು ಸುಳ್ಳಲ್ಲ. ಇದೇ ಸಮಯದಲ್ಲಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಒತ್ತು ಕೊಡುವಂತೆ ಆಗ್ರಹಿಸಿ ಎರಡು ಬಾರಿ ಬೆಳಗಾವಿಯಿಂದ ಬೆಂಗಳೂರಿನ ತನಕ ಸಾವಿರಾರು ಕಾರ್ಯಕರ್ತರನ್ನು ಕರೆದುಕೊಂಡು ಹೋದ ಕರವೇ ಆಗಿನ ಮುಖ್ಯಮಂತ್ರಿಗಳಾಗಿದ್ದ ಶ್ರೀ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿ, ಒತ್ತಡ ಹೇರಿತ್ತು. ಕರ್ನಾಟಕ ರಕ್ಷಣಾ ವೇದಿಕೆಯ ನಿರಂತರ ಕೆಲಸದಿಂದಾಗಿ ಬೆಳಗಾವಿ ರಾಜಕೀಯ ವಿಷಯವಾಗಿ ಹಾಗೂ ರಾಜ್ಯದ ಎಲ್ಲಾ ಜನರ ಗಮನಕ್ಕೆ ಬರತೊಡಗಿದಾಗ, 50 ವರ್ಷಗಳಿಂದ ನಿದ್ದೆ ಮಾಡುತ್ತಿದ್ದ ರಾಜಕೀಯ ಪಕ್ಷಗಳು ಎಚ್ಚಿತ್ತು ಬೆಳಗಾವಿಯಲ್ಲಿ ೨೦೦ ಕೋಟಿ ರೂ ವೆಚ್ಚದಲ್ಲಿ ಸುವರ್ಣಸೌಧ ನಿರ್ಮಾಣಕ್ಕೆ ಚಾಲನೆ ನೀಡಿತು ಇದರ ಜೊತೆಗೆ 2 ಬಾರಿ ಬೆಳಗಾವಿಯಲ್ಲಿ ವಿಶೇಷ ಅಧಿವೇಶನ ನಡೆಸಿತು. ಸರ್ಕಾರ ತಗೆದುಕೊಂಡ ಈ ನಿರ್ಧಾರಗಳಿಗೆ ಕರವೇಯ ಹೋರಾಟಗಳೇ ಕಾರಣವೆಂದರೆ ತಪ್ಪಲ್ಲ. ಇದಲ್ಲದೇ ಎಂಇಎಸ್ ಸಂಘಟನೆಯ ಬಲ ಮುರಿಯಲು ಪಣ ತೊಟ್ಟು ಕೆಲಸ ಮಾಡಿದ ಕರವೇ 17 ವರ್ಷಗಳ ನಂತರ ಕನ್ನಡದ ಮಹಿಳೆಯೊಬ್ಬರು ಬೆಳಗಾವಿಯ ಮಹಾಪೌರರಾಗಿ ಆಯ್ಕೆಯಾಗಲು ಕಾರಣವಾಯಿತು. ಇವತ್ತು ಎಂಇಎಸ್ ಬೆಳಗಾವಿಯ ಭಾಗದಲ್ಲಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಭೀತಿಯಲ್ಲಿದೆ.
ಮಾಡಿದವರನ್ನೇ ಮರೆತಿರುವ ರಾಜ್ಯ ಸರ್ಕಾರ:
ಬೇಸರದ ಸಂಗತಿಯೆಂದರೆ, ಕಳೆದ 50 ವರ್ಷಗಳಿಂದ ರಾಜ್ಯ ಸರ್ಕಾರದ ಕಡಗಣನೆಗೆ ಒಳಗಾಗಿದ್ದ, ಇನ್ನೇನು ಬೆಳಗಾವಿ ನಮ್ಮ ಕೈ ತಪ್ಪಿ ಹೋಯಿತು ಅನ್ನೋ ಮಟ್ಟಕ್ಕೆ ಹೋಗಿದ್ದಾಗ, ಗಡಿಭಾಗದ ನಾಯಕರು ಸೇರಿದಂತೆ, ಕನ್ನಡಿಗರಲ್ಲಿ ಧ್ಯೈರ್ಯ ತುಂಬುವ ಕೆಲಸ ಮಾಡಿದ್ದು ಕನ್ನಡಪರ ಸಂಘಟನೆಗಳೇ. ಆದರೆ ಈ ವಿಶ್ವ ಕನ್ನಡ ಸಮ್ಮೇಳನದಲ್ಲಿ ನಾಡಿನ ಯಾವುದೆ ಕನ್ನಡ ಪರ ಸಂಘಟನೆಗಳಿಗೆ ಆಹ್ವಾನವನ್ನೂ ನೀಡಿಲ್ಲ, ಅದು ಬಿಡಿ ಸರ್ಕಾರದ ಒಂದು ಭಾಗವಾಗಿ ಕೆಲಸ ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಆಹ್ವಾನ ನೀಡಲಾಗಿಲ್ಲ. ದೌರ್ಭಾಗ್ಯವೆಂದರೇ ಐಶ್ವರ್ಯ ರೈ ನಂಥ ಹಿಂದಿ ಚಿತ್ರನಟಿಯನ್ನ ಆಹ್ವಾನಿಸುವಲ್ಲಿ ಕಾಳಜಿ ಹೊಂದಿರುವ ಸರ್ಕಾರ, ಶಿಲ್ಪಾ ಶೆಟ್ಟಿಯನ್ನು ಕರೆಸಬೇಕೋ ಅಥವಾ ಬೇಡವೋ ಎಂದು ನಿರ್ಧರಿಸಲು ಸಭೆ ಸೇರುವ ಸರ್ಕಾರ, ಪ್ರತಿ ದಿನ ನಾಡಿಗೆ, ಭಾಷೆಗೆ, ನಾಡಿಗರ ಮೇಲೆ ಆಗುತ್ತಿರುವ ಅನ್ಯಾಯದ ವಿರುದ್ಧ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತಿರುವ ಕನ್ನಡ ಪರ ಸಂಘಟೆನೆಗಳಿಗೆ ಸಮ್ಮೇಳನಕ್ಕೆ ಆಹ್ವಾನ ನೀಡಿಲ್ಲ. ಕನ್ನಡ ಪರ ಸಂಘಟನೆಗಳ ಹೋರಾಟಕ್ಕೆ ಬೆಂಬಲ ನೀಡುತ್ತಾ ಬಂದಿದ್ದ ಮಾಧ್ಯಮಗಳು ಸಹ ಯಾಕೋ ಈ ವಿಷಯದ ಬಗ್ಗೆ ಗಮನಹರಿಸಿಲ್ಲ.
ಸೋಮವಾರ, ಫೆಬ್ರವರಿ 28, 2011
2011-2012ರ ಕೇಂದ್ರ ರೈಲ್ವೆ ಬಜೆಟ್: ಒಂದು ವಿಶ್ಲೇಷಣೆ

25ನೇ ತಾರೀಖಿನಂದು 2011-2012ರ ಕೇಂದ್ರ ಸರ್ಕಾರದ ರೈಲ್ವೇ ಬಜೆಟ್ ಮಂಡಿಸಲಾಗಿದೆ. ನಮ್ಮ ರಾಜ್ಯಕ್ಕೆ ಬಹಳಷ್ಟು ಒಳ್ಳೆಯ ಯೋಜನೆಗಳನ್ನು ಈ ಬಾರಿ ಬಜೆಟ್ಟಿನಲ್ಲಿ ಘೋಷಿಸಲಾಗಿದೆ ಎಂದು ನಮ್ಮ ರಾಜ್ಯದ ಕಾಂಗ್ರೆಸ್ ಪಕ್ಷ ತನ್ನ ಬೆನ್ನು ತಟ್ಟಿಕೊಂಡಿದೆ. ಈ ಬಾರಿಯ ರೈಲ್ವೇ ಬಜೆಟ್ ನಮ್ಮ ರಾಜ್ಯಕ್ಕೆ ಐತಿಹಾಸಿಕ ಎಂದು ಹೇಳಿಕೆ ನೀಡಿದ್ದ ನಮ್ಮ ರಾಜ್ಯದ ಮುಖ್ಯಮಂತ್ರಿಗಳು, ರಾತ್ರೋರಾತಿ ಜ್ಞಾನೋದಯವಾಗಿ ಮರುದಿನವೇ ರಾಜ್ಯಕ್ಕೆ ರೈಲ್ವೇ ಬಜೆಟ್ಟಿನಲ್ಲಿ ಅನ್ಯಾಯವಾಗಿದೆ ಎಂದು ಪತ್ರಿಕೆಗಳಿಗೆ ಹೇಳಿಕೆ ನೀಡಿದರು.
ಈ ಬಜೆಟ್ಟಿನಲ್ಲಿ ನಮ್ಮ ರಾಜ್ಯಕ್ಕೆ ಏನೇನು ಸಿಕ್ಕಿದೆ ಅನ್ನೋದನ್ನ ನೋಡುವುದಕ್ಕಿಂತಲೂ, ನಿಜಕ್ಕೂ ನಮ್ಮ ನಾಡಿಗೆ ಎಂಥ ರೈಲ್ವೇ ವ್ಯವಸ್ಥೆ ಬೇಕು ಎನ್ನೋದನ್ನ ನೋಡೋಣ. ಇದರ ಜೊತೆಜೊತೆಗೆ ನಮ್ಮ ಈ ಸರ್ತಿಯ ಬಜೆಟ್ಟಿನಲ್ಲಿ ಏನು ಸಿಕ್ಕಿದೆ ಅನ್ನೋದನ್ನ ಸಹ ನೋಡೋಣ.
ನಾಡಿನ ಪ್ರಮುಖ ನಗರಗಳ ನಡುವೆ ಸಂಪರ್ಕ ಜಾಲ:
ಕರ್ನಾಟಕ ರಾಜ್ಯದ ಎಲ್ಲಾ ಪ್ರಮುಖ ಕೈಗಾರಿಕಾ ನಗರಗಳನ್ನು, ಬಂದರುಗಳನ್ನು, ಪ್ರವಾಸಿ ತಾಣಗಳನ್ನು, ಎಲ್ಲಾ ಜಿಲ್ಲಾಕೇಂದ್ರಗಳನ್ನು ಜೋಡಿಸುವಂತಹ ಯೋಜನೆಗಳು ನಮ್ಮ ನಾಡಿಗೆ ಬೇಕಾಗಿವೆ. ಮಂಗಳೂರು, ಪಡುಬಿದ್ರಿ, ಮಲ್ಪೆ, ಭಟ್ಕಳ, ಹೊನ್ನಾವರ ಮೊದಲಾದ ಬಂದರುಗಳಿಗೆ ರೈಲು ಸಂಚಾರ ಕಲ್ಪಿಸಬೇಕಾಗಿತ್ತು, ಆದರೆ ಈ ಯೋಜನೆಗಳಿಗೆ ಕೇಂದ್ರ ಸರ್ಕಾರ ಯಾವುದೇ ಗಮನ ಹರಿಸಿಲ್ಲ. ಹಾಗೆಯೇ ರಾಜ್ಯದ ಯಾವುದೇ ಪ್ರವಾಸಿ ತಾಣಗಳಿಗೆ ಈ ಬಜೆಟ್ಟಿನಲ್ಲಿ ರೈಲು ಸಂಪರ್ಕ ಕಲ್ಪಿಸಲಾಗಿಲ್ಲ. ಈ ಬಜೆಟ್ಟಿನಲ್ಲಿ ಕೆಲವು ರೈಲ್ವೆ ಯೋಜನೆಗಳು ಮಂಜೂರಾಗಿದ್ದರು ಸಹ, ಕೆಲವು ರೈಲುಗಳ ಓಡಾಡುವ ದಾರಿ ತುಂಬಾ ಚಿಕ್ಕದು ಅಥವಾ ಈ ಮುಂಚೆಯೇ ಆ ನಗರಗಳಿಗೆ ಹಲವಾರು ರೈಲುಗಳು ಓಡಾಡುತ್ತಿವೆ. ಆದರೆ ಪ್ರಮುಖವಾಗಿ ಒಳನಾಡನ್ನು ಸಂಪರ್ಕಿಸಬೇಕಾಗಿದ್ದ ಹಲವು ಯೋಜನೆಗಳನ್ನು ಈ ಬಜೆಟ್ಟಿನಲ್ಲಿ ಪರಿಗಣಿಸಲಾಗಿಲ್ಲ. ಅಂತರ ರಾಜ್ಯ ರೈಲುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ, ಇದರಿಂದ ವಲಸೆಗೆ ಉತ್ತೇಜನ ನೀಡಿದಂತಾಗಬಹುದು. ಹೊಸ ಮಾರ್ಗ, ಗೇಜ್ ಪರಿವರ್ತನೆ ಸೇರಿದಂತೆ ಮತ್ತಿತರ ಪ್ರಗತಿಯಲ್ಲಿರುವ ಯೋಜನೆಗಳಿಗೆ ಅನುದಾನ ಸಿಕ್ಕಿಲ್ಲ.
ಉದಾ: ಬೆಂಗಳೂರು - ಬೆಳಗಾವಿ, ಬೀದರ್ - ಬೆಂಗಳೂರು, ಮೈಸೂರು - ಬಿಜಾಪುರ, ಹೊಸಪೇಟೆ - ಬೆಂಗಳೂರು, ಹುಬ್ಬಳ್ಳಿ - ಗುಲ್ಬರ್ಗ, ಬೆಂಗಳೂರು - ಚಾಮರಾಜನಗರ, ಅರಸೀಕೆರೆ - ಬೆಂಗಳೂರು, ಬಂಗಾರಪೇಟೆ - ರಾಮನಗರ, ತುಮಕೂರು - ಚನ್ನಪಟ್ಟಣ, ಬೆಂಗಳೂರು - ದಾವಣಗೆರೆ - ಹುಬ್ಬಳ್ಳಿ - ಲೋಂಡಾ, ವಾಸ್ಕೋ - ಕಾರವಾರ - ಮಂಗಳೂರು - ಹಾಸನ ಮುಂತಾದ ಒಳನಾಡಿಗೆ ಸಂಪರ್ಕ ಕಲ್ಪಿಸುವ ಯೋಜನೆಗಳು ಜಾರಿಯಾಗಿಲ್ಲ.
ಇದರ ಜೊತೆಗೆ ಪ್ರಗತಿಯಲ್ಲಿರುವ ಮುನಿರಾಬಾದ್ - ಮೆಹಬೂಬನಗರ, ಕಡೂರು - ಚಿಕ್ಕಮಗಳೂರು - ಸಕಲೇಶಪುರ, ಬೀದರ್ - ಗುಲ್ಬರ್ಗ , ಚಿಕ್ಕಬಳ್ಳಾಪುರ - ಕೋಲಾರ, ನೆಲಮಂಗಲ - ಶ್ರವಣಬೆಳಗೊಳ, ಶ್ರೀನಿವಾಸಪುರ - ಮದನಪಲ್ಲಿ ಯೋಜನೆಗಳ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲ.
ಉತ್ತರ ಕರ್ನಾಟಕ, ಮಲೆನಾಡು, ಕೋಲಾರ ಜಿಲ್ಲೆ ಮತ್ತು ಕೊಂಕಣ ಭಾಗಕ್ಕೆ ಸಂಪರ್ಕ ಕಲ್ಪಿಸುವ 7 ಯೋಜನೆಗಳ ಬಗ್ಗೆ ಈ ಬಜೆಟ್ಟಿನಲ್ಲಿ ಯಾವುದೇ ಪ್ರಸ್ತಾಪವಿಲ್ಲ. ಈ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಶೇ 50 ರಷ್ಟು ಹಣವನ್ನು ನೀಡುವುದಾಗಿ ಹೇಳಿತ್ತು. ಈ 7 ಯೋಜನೆಗಳು ಈ ರೀತಿ ಇವೆ: ಶಿವಮೊಗ್ಗ - ಹರಿಹರ, ವೈಟ್ ಫೀಲ್ಡ್ - ಕೋಲಾರ, ತುಮಕೂರು - ದಾವಣಗೆರೆ, ಗದಗ - ಹಾವೇರಿ, ಬಿಜಾಪುರ - ಶಹಾಬಾದ್, ಧಾರವಾಡ - ಬೆಳಗಾವಿ ಹಾಗೂ ತಾಳಗುಪ್ಪ - ಹೊನ್ನಾವರ.
ರೈಲುಮಾರ್ಗಗಳ ವಿದ್ಯುದೀಕರಣ:
ಇಡೀ ಕರ್ನಾಟಕದ ಶೇಕಡಾ 5%ಕ್ಕಿಂತ ಕಡಿಮೆ ರೈಲುಮಾರ್ಗ ವಿದ್ಯುದೀಕರಣವಾಗಿದ್ದು ಅದೂ ಕೂಡಾ ಅಂತರರಾಜ್ಯ ರೈಲುಮಾರ್ಗಗಳು ಮಾತ್ರವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ವಿದ್ಯುತ್ ಮಾರ್ಗಗಳು ಭಾಗಷಃ ಇಲ್ಲವೆಂದೇ ಹೇಳಬೇಕಾಗಿದೆ. ಈ ಬಜೆಟ್ಟಿನಲ್ಲಿ ರೈಲು ವಿದ್ಯುದೀಕರಣಕ್ಕೆ ಒತ್ತು ನೀಡಲಾಗಿಲ್ಲ.
ಪೂರಕ ಉದ್ದಿಮೆಗಳು:
ಈ ಸರತಿಯ ಬಜೆಟ್ಟಿನಲ್ಲಿ ರಾಜ್ಯಕ್ಕೆ ಹೆಚ್ಚು ಉಪಯೋಗವಾಗುವಂತಹ ಅಥವಾ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವಂತಹ ಪೂರಕ ಯೋಜನೆಗಳನು ಜಾರಿ ಮಾಡಲಾಗಿಲ್ಲ. ವಿವಿಧೋದ್ದೇಶ ತರಬೇತಿ ಕೇಂದ್ರ ಧಾರವಾಡದಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ, ಹುಬ್ಬಳ್ಳಿ-ಧಾರವಾಡದಲ್ಲಿ ಪಾಲಿಟೆಕ್ನಿಕ್ ಶುರು ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಆದರೆ ರೈಲ್ವೆ ಕೋಚ್ ಕಾರ್ಖಾನೆ, ರೈಲುಗಳಲ್ಲಿ ಮಾರಲಾಗುವ ಊಟ, ನೀರು ಮೊದಲಾದ ಪ್ಯಾಕೆಜಿಂಗ್ ಕಾರ್ಖಾನೆಗಳನ್ನು ಕರ್ನಾಟಕಕ್ಕೇ ನೀಡಲಾಗಿಲ್ಲ. ಕೇವಲ ಹುಬ್ಬಳ್ಳಿ, ಚಿಂತಾಮಣಿ, ಶಿಡ್ಲಘಟ್ಟ ಮತ್ತು ಶ್ರೀನಿವಾಸಪುರಗಳ ರೈಲ್ವೆ ನಿಲ್ದಾಣಗಳನ್ನು ಆದರ್ಶ ನಿಲ್ದಾಣಗಳನ್ನಾಗಿ ಮಾಡುವುದಾಗಿ ಘೋಷಿಸಲಾಗಿದೆ, ಆದರೆ ನಮ್ಮ ರಾಜ್ಯದ ಅನೇಕ ಜಿಲ್ಲಾ ಕೇಂದ್ರಗಳ ರೈಲ್ವೆ ನಿಲ್ದಾಣಗಳೇ ಮೂಕಭೂತ ಸೌಕರ್ಯದಿಂದ ವಂಚಿತವಾಗಿವೆ, ಇಂತಹ ನಿಲ್ದಾನಗಳತ್ತ ಗಮನ ಹರಿಸಲಾಗಿಲ್ಲ.
ಪ್ರತ್ಯೇಕ ವಿಭಾಗಗಳಿಗೆ ಬೇಡಿಕೆ:
ಕಳೆದ ಎರೆಡು ದಶಕಗಳಿಂದ ಗುಲ್ಬರ್ಗಾ ಮತ್ತು ಮಂಗಳೂರು ವಿಭಾಗಗಳ ವಿಚಾರ ನೆನೆಗುದಿಗೆ ಬಿದ್ದಿದೆ. ಈ ವಿಭಾಗಗಳಾದರೆ ಪ್ರಸ್ತಾವಿತ ಯೋಜನೆಗಳ ನಿರ್ವಹಣೆ, ರೈಲ್ವೆ ಸೇವೆಗಳ ಉಸ್ತುವಾರಿ ಹಾಗು ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇದರಿಂದ ಕನ್ನಡಿಗರಿಗೆ ಗ್ರಾಹಕ ಸೇವೆಯ ಜೊತೆಗೆ ನಾಡಿನ ಅನೇಕ ಯುವಕರಿಗೆ ಉದ್ಯೋಗಾವಕಾಶ ದೊರಕಿದಂತಾಗುತ್ತದೆ.
ಅರ್ಧದಷ್ಟು ತಾಲೂಕುಗಳಿಗೆ ರೈಲೇ ಇಲ್ಲಾ:
ರಾಜ್ಯದ 176 ತಾಲೂಕುಗಳ ಪೈಕಿ ಅರ್ಧದಷ್ಟು ತಾಲೂಕುಗಳು ಅಂದರೆ 86 ತಾಲೂಕುಗಳಿಗೆ ರೈಲಿನ ಸಂಪರ್ಕವೇ ಇಲ್ಲ. ಜಿಲ್ಲಾ ಕೇಂದ್ರಗಳಾದ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ಸಹ ರೈಲಿನ ಸಂಪರ್ಕದಿಂದ ದೂರ ಉಳಿದಿವೆ. ಕೊಡಗು ಜಿಲ್ಲೆಯಲ್ಲಿರುವ ಮೂರು ತಾಲೂಕುಗಳಲ್ಲಿಯೂ ರೈಲು ಇಲ್ಲಾ.
ಬಹುಶಃ ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಹಾಗೂ ಜನಪ್ರತಿನಿಧಿಗಳು ಸರಿಯಾಗಿ ಕೆಲಸ ಮಾಡಬೇಕಾದ ಅಗತ್ಯತೆ ಇದೆ. ಜೊತೆಜೊತೆಗೆ ನಮ್ಮ ರಾಜ್ಯ ಸರ್ಕಾರ ಕೂಡ ನಮ್ಮ ನಾಡಿಗೆ ಬೇಕಾಗಿರುವ ಯೋಜನೆಗಳನ್ನು ಆದ್ಯತೆಯ ಮೇರೆಗೆ ಅನುಷ್ಠಾನಕ್ಕೆ ತರಲು ಕೆಲಸ ಮಾಡಬೇಕು ಹಾಗೂ ಕೇಂದ್ರದ ಮೇಲೆ ಒತ್ತಡ ಹೇರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು.
ಶುಕ್ರವಾರ, ಫೆಬ್ರವರಿ 18, 2011
ನಮ್ಮ ರಾಜ್ಯವನ್ನು ಪ್ರತಿನಿಧಿಸಲು ಜನರಿಲ್ಲವೇ???
ಇದು ಖಂಡಿತಾ ಕರ್ನಾಟಕದ ದೌರ್ಭಾಗ್ಯದ ಪರಮಾವಧಿ. ಹೈಕಮಾಂಡ್ ದಾಸ್ಯಕ್ಕೆ ಸಿಲುಕಿರುವ ಬಿಜೆಪಿ ಪಕ್ಷ ಮತ್ತೊಂದು ಎಡವಟ್ಟು ತೀರ್ಮಾನ ಕೈಗೊಂಡಿದೆ. ಹಿರಿಯ ರಾಜಕಾರಣಿ ಶ್ರೀ ರಾಜಶೇಖರ ರ್ಮೂರ್ತಿಯವರ ನಿಧನದಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಹಿಂದಿ ಚಲನಚಿತ್ರ ನಟಿ ಶ್ರೀಮತಿ ಹೇಮಾ ಮಾಲಿನಿ ಅವರನ್ನ ರಾಜ್ಯದಿಂದ ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ.
ರಾಜ್ಯಸಭಾ ಸದಸ್ಯತ್ವ ಅಂದರೇನು?
ಒಬ್ಬ ರಾಜ್ಯಸಭಾ ಸದಸ್ಯ ಮುಖ್ಯವಾಗಿ ಆಯಾ ರಾಜ್ಯದ ಪ್ರತಿನಿಧಿಯಾಗಿ ಸಂಸತ್ತಿನ ಮೇಲ್ಮನೆಯಲ್ಲಿ ಕೆಲಸಮಾಡುತ್ತಾರೆ. ರಾಜ್ಯಸಭೆ ಅನ್ನುವುದು ಒಕ್ಕೂಟ ವ್ಯವಸ್ಥೆಯ ಒಂದು ಮುಖ್ಯ ಭಾಗ. ಕೇಂದ್ರದಲ್ಲಿ ಲೋಕಸಭೆಗಿರುವಷ್ಟೇ ಪ್ರಾಮುಖ್ಯತೆ ರಾಜ್ಯಸಭೆಗೂ ಇದೆ. ರಾಜ್ಯಸಭಾ ಸದಸ್ಯರನ್ನು ಆಯಾ ರಾಜ್ಯದ ಶಾಸಕರು ಆಯ್ಕೆ ಮಾಡುತ್ತಾರೆ.
ನಮ್ಮ ರಾಜ್ಯವನ್ನೂ ಪ್ರತಿನಿಧಿಸಲು ಅರ್ಹ ಜನಪ್ರತಿನಿಧಿಗಳು ಇಲ್ಲವೇ?
ಇಷ್ಟಕ್ಕೂ ರಾಜ್ಯಸಭೆ ಸ್ಥಾನಕ್ಕೆ ಹೇಮಾ ಮಾಲಿನಿಯವರನ್ನು ಕಣಕ್ಕಿಳಿಸಲು ಇರುವ ಅರ್ಹತೆಯಾದರೂ ಏನು? ಮೊದಲನೆಯದಾಗಿ ಹೇಮಾ ಮಾಲಿನಿ ನಮ್ಮ ನಾಡಿನವರಲ್ಲ, ಹೋಗಲಿ ಆ ಕಾರಣವನ್ನು ಬದಿಗಿಟ್ಟು ನೋಡೋಣವೆಂದರೆ ಅವರಿಂದ ನಮ್ಮ ರಾಜ್ಯಕ್ಕೆ ಆಗಿರುವ ಉಪಯೋಗವಾದರೂ ಏನು? ನಮ್ಮ ನಾಡಿನ ಯಾವ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವ ಪ್ರಯತ್ನ ರಾಜ್ಯ ಮಟ್ಟದಲ್ಲಾಗಲಿ ಅಥವಾ ಕೇಂದ್ರ ಮಟ್ಟದಲ್ಲಾಗಲಿ ಪ್ರಯತ್ನಿಸಿದ್ದಾರೆ? ನಮ್ಮ ನೆಲ, ಜಲ, ಭಾಷೆ, ಉದ್ಯೋಗ, ಉದ್ದಿಮೆ ಹೀಗೆ ಯಾವ ಕಾರಣಕ್ಕಾಗಿ ನಮ್ಮ ನಾಡಿಗಾಗಿ ಕೆಲಸ ಮಾಡಿದ್ದಾರೆ? ಯಾವುದೇ ದೃಷ್ಠಿಯಿಂದ ನೋಡಿದರೂ ಸಹ ಹೇಮಾ ಮಾಲಿನಿ ನಮ್ಮ ರಾಜ್ಯದ ಪ್ರತಿನಿಧಿಯಾಗಿ ರಾಜ್ಯಸಭೆ ಪ್ರವೇಶಿಸಲು ಅರ್ಹರಲ್ಲ. ಇಂತಹುದೇ ತಪ್ಪನ್ನು ಹಿಂದೆ ಬಿಜೆಪಿ ಹೈಕಮಾಂಡ್ ವೆಂಕಯ್ಯ ನಾಯ್ಡು ಅವರನ್ನ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಿವಾಗ ಮಾಡಿತ್ತು. ಕಾಂಗ್ರೆಸ್ ಹಾಗೂ ಜನತಾದಳ ಪಕ್ಷಗಳು ಸಹಿತ ಇಂತಹುದೇ ತಪ್ಪನ್ನು ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ.
ಗಮನಿಸಬೇಕಾದ ಅಂಶವೆಂದರೆ ನಮ್ಮ ನಾಡಿನಲ್ಲಿ ರಾಜ್ಯಸಭೆಗೆ ಅರ್ಹರಾಗಿರುವ ಯಾವುದೇ ನಾಯಕರು ಬಿಜೆಪಿ ಹೈಕಮಾಂಡಿಗೆ ಕಾಣಸಿಗಲಿಲ್ಲವೇ? ನಮ್ಮ ನಾಡನ್ನ ಉದ್ಧಾರ ಮಾಡೋದಕ್ಕೆ ಬೇರೆ ರಾಜ್ಯದ ಜನರನ್ನ ಕರೆದುಕೊಂಡು ಬರಬೇಕಾದ ಪರಿಸ್ಥಿತಿ ಬಂದಿದೆಯೇ? ನಮ್ಮ ನಾಡಿನ ರಾಜಕೀಯ ನಾಯಕರು ಆಗುತ್ತಿರುವ ತಪ್ಪನ್ನು ನೋಡಿಕೊಂಡು ಸುಮ್ಮನಿದ್ದಾರೆಯೇ? ಸುಮಾರು ಮೂರ್ನಾಲ್ಕು ದಶಕಗಳಿಂದ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ದುಡಿದಿರುವಂತಹ ಬಿಜೆಪಿಯ ಕಾರ್ಯಕರ್ತರೆಲ್ಲಾ ಹೈಕಮಾಂಡ್ ಕಣ್ಣಿಗೆ ಕಾಣಿಸುತ್ತಿಲ್ಲವೇ? ಈ ಸರ್ತಿಯಾದರು ಬಿಜೆಪಿ ಪಕ್ಷ ತನ್ನ ತಪ್ಪನ್ನು ತಿದ್ದಿಕೊಳ್ಳುತ್ತಾ? ಕಾದು ನೋಡಬೇಕು.........
ರಾಜ್ಯಸಭಾ ಸದಸ್ಯತ್ವ ಅಂದರೇನು?
ಒಬ್ಬ ರಾಜ್ಯಸಭಾ ಸದಸ್ಯ ಮುಖ್ಯವಾಗಿ ಆಯಾ ರಾಜ್ಯದ ಪ್ರತಿನಿಧಿಯಾಗಿ ಸಂಸತ್ತಿನ ಮೇಲ್ಮನೆಯಲ್ಲಿ ಕೆಲಸಮಾಡುತ್ತಾರೆ. ರಾಜ್ಯಸಭೆ ಅನ್ನುವುದು ಒಕ್ಕೂಟ ವ್ಯವಸ್ಥೆಯ ಒಂದು ಮುಖ್ಯ ಭಾಗ. ಕೇಂದ್ರದಲ್ಲಿ ಲೋಕಸಭೆಗಿರುವಷ್ಟೇ ಪ್ರಾಮುಖ್ಯತೆ ರಾಜ್ಯಸಭೆಗೂ ಇದೆ. ರಾಜ್ಯಸಭಾ ಸದಸ್ಯರನ್ನು ಆಯಾ ರಾಜ್ಯದ ಶಾಸಕರು ಆಯ್ಕೆ ಮಾಡುತ್ತಾರೆ.
ನಮ್ಮ ರಾಜ್ಯವನ್ನೂ ಪ್ರತಿನಿಧಿಸಲು ಅರ್ಹ ಜನಪ್ರತಿನಿಧಿಗಳು ಇಲ್ಲವೇ?
ಇಷ್ಟಕ್ಕೂ ರಾಜ್ಯಸಭೆ ಸ್ಥಾನಕ್ಕೆ ಹೇಮಾ ಮಾಲಿನಿಯವರನ್ನು ಕಣಕ್ಕಿಳಿಸಲು ಇರುವ ಅರ್ಹತೆಯಾದರೂ ಏನು? ಮೊದಲನೆಯದಾಗಿ ಹೇಮಾ ಮಾಲಿನಿ ನಮ್ಮ ನಾಡಿನವರಲ್ಲ, ಹೋಗಲಿ ಆ ಕಾರಣವನ್ನು ಬದಿಗಿಟ್ಟು ನೋಡೋಣವೆಂದರೆ ಅವರಿಂದ ನಮ್ಮ ರಾಜ್ಯಕ್ಕೆ ಆಗಿರುವ ಉಪಯೋಗವಾದರೂ ಏನು? ನಮ್ಮ ನಾಡಿನ ಯಾವ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವ ಪ್ರಯತ್ನ ರಾಜ್ಯ ಮಟ್ಟದಲ್ಲಾಗಲಿ ಅಥವಾ ಕೇಂದ್ರ ಮಟ್ಟದಲ್ಲಾಗಲಿ ಪ್ರಯತ್ನಿಸಿದ್ದಾರೆ? ನಮ್ಮ ನೆಲ, ಜಲ, ಭಾಷೆ, ಉದ್ಯೋಗ, ಉದ್ದಿಮೆ ಹೀಗೆ ಯಾವ ಕಾರಣಕ್ಕಾಗಿ ನಮ್ಮ ನಾಡಿಗಾಗಿ ಕೆಲಸ ಮಾಡಿದ್ದಾರೆ? ಯಾವುದೇ ದೃಷ್ಠಿಯಿಂದ ನೋಡಿದರೂ ಸಹ ಹೇಮಾ ಮಾಲಿನಿ ನಮ್ಮ ರಾಜ್ಯದ ಪ್ರತಿನಿಧಿಯಾಗಿ ರಾಜ್ಯಸಭೆ ಪ್ರವೇಶಿಸಲು ಅರ್ಹರಲ್ಲ. ಇಂತಹುದೇ ತಪ್ಪನ್ನು ಹಿಂದೆ ಬಿಜೆಪಿ ಹೈಕಮಾಂಡ್ ವೆಂಕಯ್ಯ ನಾಯ್ಡು ಅವರನ್ನ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಿವಾಗ ಮಾಡಿತ್ತು. ಕಾಂಗ್ರೆಸ್ ಹಾಗೂ ಜನತಾದಳ ಪಕ್ಷಗಳು ಸಹಿತ ಇಂತಹುದೇ ತಪ್ಪನ್ನು ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ.
ಗಮನಿಸಬೇಕಾದ ಅಂಶವೆಂದರೆ ನಮ್ಮ ನಾಡಿನಲ್ಲಿ ರಾಜ್ಯಸಭೆಗೆ ಅರ್ಹರಾಗಿರುವ ಯಾವುದೇ ನಾಯಕರು ಬಿಜೆಪಿ ಹೈಕಮಾಂಡಿಗೆ ಕಾಣಸಿಗಲಿಲ್ಲವೇ? ನಮ್ಮ ನಾಡನ್ನ ಉದ್ಧಾರ ಮಾಡೋದಕ್ಕೆ ಬೇರೆ ರಾಜ್ಯದ ಜನರನ್ನ ಕರೆದುಕೊಂಡು ಬರಬೇಕಾದ ಪರಿಸ್ಥಿತಿ ಬಂದಿದೆಯೇ? ನಮ್ಮ ನಾಡಿನ ರಾಜಕೀಯ ನಾಯಕರು ಆಗುತ್ತಿರುವ ತಪ್ಪನ್ನು ನೋಡಿಕೊಂಡು ಸುಮ್ಮನಿದ್ದಾರೆಯೇ? ಸುಮಾರು ಮೂರ್ನಾಲ್ಕು ದಶಕಗಳಿಂದ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ದುಡಿದಿರುವಂತಹ ಬಿಜೆಪಿಯ ಕಾರ್ಯಕರ್ತರೆಲ್ಲಾ ಹೈಕಮಾಂಡ್ ಕಣ್ಣಿಗೆ ಕಾಣಿಸುತ್ತಿಲ್ಲವೇ? ಈ ಸರ್ತಿಯಾದರು ಬಿಜೆಪಿ ಪಕ್ಷ ತನ್ನ ತಪ್ಪನ್ನು ತಿದ್ದಿಕೊಳ್ಳುತ್ತಾ? ಕಾದು ನೋಡಬೇಕು.........
ಮಂಗಳವಾರ, ಫೆಬ್ರವರಿ 15, 2011
ಜನರ ಹಿತವನ್ನೇ ಮರೆತಿರುವ ಜನಪ್ರತಿನಿಧಿಗಳು

ನಮ್ಮ ರಾಜ್ಯದ ಸದ್ಯದ ಭವಿಷ್ಯವನ್ನು ನೆನೆಸಿಕೊಂಡರೆ ಭಯವಾಗಿ ಹೋಗುತ್ತದೆ. ಕಳೆದ ವರ್ಷದ ಅಂತ್ಯದಲ್ಲಿ ಬಂದ ಎರಡನೇ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಅನ್ನುವುದನ್ನ ನಿಮಗೆ ಈಗಾಗಲೇ ತಿಳಿಸಲಾಗಿದೆ. ಹಾಗೆಯೇ ಈ ತೀರ್ಪು ಐತಿಹಾಸಿಕ ಅಂತ ಬಣ್ಣಿಸಿ ನಮ್ಮ ರಾಜ್ಯಸರ್ಕಾರ ಹಾಗು ಇತರೇ ರಾಜಕೀಯ ಪಕ್ಷಗಳು ಸುಮ್ಮನಾಗಿ ಹೋಗಿದ್ದವು. ತೀರ್ಪಿನ ವಿರುದ್ಧವಾಗಿ ಧ್ವನಿ ಎತ್ತಿದವರು ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ತೀರ್ಪನ್ನು ವಿಮರ್ಶಿಸುವುದಾಗಿ ಹೇಳಿಕೆ ನೀಡಿತು. ರಾಜ್ಯ ಸರ್ಕಾರದ ಈ ನಿಲುವು ಸ್ವಾಗತಾರ್ಹವೇ.
ಜನಪ್ರತಿನಿಧಿಗಳ ಸಭೆಯನ್ನು ಕರೆದ ಸರ್ಕಾರ:
ಕೃಷ್ಣಾ ನ್ಯಾಯಾಧಿಕರಣ ಆಲಮಟ್ಟಿ ಜಲಾಶಯದ ಎತ್ತರ, ರಾಜ್ಯಕ್ಕೆ ಹಂಚಿರುವ ನೀರಿನ ಪಾಲು, ಇದರ ಬಳಕೆಗೆ ಅನುಸರಿಸಬೇಕಾದ ವಿಧಾನಗಳ ಕುರಿತು ಕೃಷ್ಣಾ ಕಣಿವೆಯ 17 ಜಿಲ್ಲೆಗಳ ಜನಪ್ರತಿನಿಧಗಳ ಅಭಿಪ್ರಾಯ ಸಂಗ್ರಹಿಸಲು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಫೆಬ್ರವರಿ 14ರಂದು ಜನಪ್ರತಿನಿಧಗಳ ಸಭೆ ಕರೆದಿದ್ದರು. ಈ ಸಭೆಯ ಮತ್ತೊಂದು ಮುಖ್ಯವಾದ ಅಂಶವೇನೆಂದರೆ, ಇದರಲ್ಲಿ ಜನಪ್ರತಿನಿಧಿಗಳು ಕೇವಲ ಹಾಜರಿರದೆ ಚರ್ಚೆಯಲ್ಲಿ ಪಾಲ್ಗೊಂಡು ಜನರ ನಿಲುವನ್ನು ರೂಪಿಸುವ ಉದ್ದೇಶವನ್ನು ಹೊಂದಿತ್ತು.
ಸಭೆಗೆ ಬಾರದ ಜನಪ್ರತಿನಿಧಿಗಳು:
ರಾಜ್ಯದ ಬಹುಪಾಲು ಜಿಲ್ಲೆಗಳನ್ನು ಹಸನುಗೊಳಿಸುವ ಶಕ್ತಿ ಇರುವ ಕೃಷ್ಣಾ ನದಿಯ ತೀರ್ಪಿನಲ್ಲಿ ಸುಮಾರು 100 ಟಿಎಂಸಿ ಅಡಿ ನೀರು ಕಡಿಮೆ ಸಿಕ್ಕಿದ್ದರೂ ಈ ಭಾಗದ ಜನಪ್ರತಿನಿಧಿಗಳು ತೀರ್ಪಿನ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ರಾಜ್ಯದ ರೈತರ, ಕೃಷಿಯ ಹಾಗೂ ಜನರ ಭವಿಷ್ಯವನ್ನ ನಿರ್ಧರಿಸುವ ಇಂತಹ ಜವಾಬ್ದಾರಿಯುತ ಸಭೆಗಳಿಗೆ ಜನಪ್ರತಿನಿಧಿಗಳು ಹಾಜರಾಗದೆ ಇರುವಂತೆ ಇವರುಗಳು ಮಾಡುವ ಘನಂದಾರಿ ಕೆಲಸಗಳಾದರು ಏನು? ಇದರಲ್ಲಿ ನಾಡಿನ ಎಲ್ಲಾ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು ಸೇರಿದ್ದಾರೆ. ಕೆಲವೇ ಶಾಸಕರನ್ನ ಬಿಟ್ಟರೆ ಉಳಿದ ಶಾಸಕರು, ಸಚಿವರುಗಳು ಹಾಗು ಸಂಸದರು ಈ ಸಭೆ ಹಾಜರಾಗಲೇ ಇಲ್ಲ. ಆಯಾ ಪ್ರದೇಶದ ಅಭಿವೃದ್ಧಿಗೆ ಶ್ರಮಿಸಬೇಕಾಗಿರುವುದು ಆಯಾ ಪ್ರದೇಶದ ಶಾಸಕರ, ಸಂಸದರ ಹಾಗೂ ಅಲ್ಲಿನ ಜನಪ್ರತಿನಿಧಿಗಳ ಕರ್ತವ್ಯ, ಅದೊಂದನ್ನು ಬಿಟ್ಟು ಅವರಿಗೆ ಬೇರೆ ಯಾವುದೇ ಕೆಲಸವಿಲ್ಲ. ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಯ ಮೂಲಕ ಕರ್ನಾಟಕದ ಅಭಿವೃದ್ಧಿ ಕಾಣಬಹುದು, ಕರ್ನಾಟಕದ ಅಭಿವೃದ್ಧಿಯ ಮೂಲಕ ದೇಶದ ಅಭಿವೃದ್ಧಿಯನ್ನು ಕಾಣಬಹುದು. ಆದರೆ ಕೊಟ್ಟ ಮಾತಿನಂತೆ ನಮ್ಮ ಜನಪ್ರತಿನಿಧಿಗಳು ನಡೆದು ಕೊಳ್ಳುತ್ತಿದ್ದಾರೆಯೇ? ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆಯೇ?
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
